ದೇಶ

ಪಾಕ್ ಗೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ; ಕೇಂದ್ರ ಸಚಿವ ಸಂಪುಟ ಸಭೆ

Shilpa D

ನವದೆಹಲಿ: ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ.

ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅರುಣ್ ಜೈಟ್ಲಿ,  ಸುಷ್ಮಾ ಸ್ವರಾಜ್, ಮನೋಹರ್ ಪರಿಕ್ಕರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಉರಿ ದಾಳಿ ಬಗ್ಗೆ ಚರ್ಚೆ ನಡೆಯುತ್ತಿದ್ದು, ಉರಿ ಪ್ರದೇಶದಲ್ಲಿ ಭಧ್ರತೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.

ಪಾಕಿಸ್ತಾನವನ್ನು ಭಯೋತ್ಪಾದಕತೆಯ ಪ್ರಾಯೋಜಕ ರಾಷ್ಟ್ರ ಎಂದು ಘೋಷಿಸುವಂತೆ ಅಮೆರಿಕ ಸಂಸತ್ತಿನಲ್ಲಿ ವಿದೇಶಾಂಗ ವಿಧೇಯಕವನ್ನು ಮಂಡಿಸಲಾಗಿದೆ.

ಒಂದು ವೇಳೆ ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಕ ರಾಜ್ಯ ಎಂದು ವಿಶ್ವ ಸಂಸ್ಥೆ ಘೋಷಿಸಿದ್ದೇ ಆದರೆ ಪಾಕಿಸ್ತಾನಕ್ಕೆ ಮುಜುಗರವಾಗುವುದರಲ್ಲಿ ಎರಡನೇ ಮಾತಿಲ್ಲ.

SCROLL FOR NEXT