ಶಿವಸೇನೆ 
ದೇಶ

ಉರಿ ಉಗ್ರ ದಾಳಿ: ಪಾಕ್ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಿ: ಕೇಂದ್ರಕ್ಕೆ ಶಿವಸೇನೆ

ಉರಿ ಸೆಕ್ಟರ್ ಮೇಲೆ ದಾಳಿ ಮಾಡಿ 18 ಯೋಧರನ್ನು ಬಲಿ ಪಡೆದುಕೊಂಡಿರುವ ಪಾಕಿಸ್ತಾನದ ವಿರುದ್ದ ಪ್ರತೀಕಾರ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ...

ಮುಂಬೈ: ಉರಿ ಸೆಕ್ಟರ್ ಮೇಲೆ ದಾಳಿ ಮಾಡಿ 18 ಯೋಧರನ್ನು ಬಲಿ ಪಡೆದುಕೊಂಡಿರುವ ಪಾಕಿಸ್ತಾನದ ವಿರುದ್ದ ಪ್ರತೀಕಾರ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.

ಈ ಕುರಿತಂತೆ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆಯು. ದಾಳಿ ಮಾಡುತ್ತಿರುವ ಇಸ್ಲಾಮಾಬಾದ್ ಗೆ ಸೇನಾ ಭಾಷೆಯಿಂದಷ್ಟೇ ಅರ್ಥ ಮಾಡಿಸಬೇಕಿದೆ. ಪಾಕಿಸ್ತಾನ ಲಜ್ಜೆಗೆಟ್ಟ ದೇಶವಾಗಿದ್ದು, ಕೇವಲ ಮಾತಿನ ಮೂಲಕ ಅದನ್ನು ಸೋಲಿಸುವುದಲ್ಲ, ಸೇನಾ ಭಾಷೆಯಿಂದ ಅರ್ಥ ಮಾಡಿಸಬೇಕಾಗಿದೆ ಎಂದು ಹೇಳಿಕೊಂಡಿದೆ.

ಪಾಕಿಸ್ತಾನ ಭಯೋತ್ಪಾದನಾ ದೇಶವಾಗಿದ್ದು, ಭಯೋತ್ಪಾದನಾ ದೇಶವೆಂದು ಘೋಷಣೆ ಮಾಡುವುದಕ್ಕೆ ಶ್ರಮವೇಕೆ ಪಡಬೇಕು? ಪಾಕಿಸ್ತಾನದ ಬಣ್ಣ ಇಡೀ ವಿಶ್ವಕ್ಕೆ ತಿಳಿದಿದೆ. ಅಧಿಕಾರಕ್ಕೆ ಬರುವಾಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಭರವಸೆಗಳು ಇಂದು ಎಲ್ಲಿಗೆ ಹೋಗಿದೆ?...ಉರಿ ಸೆಕ್ಟರ್ ನಲ್ಲಿ ಉಗ್ರರು ದಾಳಿ ಮಾಡಿದ್ದಾರೆ. ಆದರೆ, ಮೋದಿಯವರು ತಾವು ನೀಡಿದ್ದ ಒಂದು ಭರವಸೆಗೂ ಬದ್ಧರಾಗಿಲ್ಲ.

ಉರಿ ದಾಳಿ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಶಿಕ್ಷೆ ನೀಡಿಯೇ ತೀರುತ್ತೇವೆ. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ಹುತಾತ್ಮರಾದ ಎಲ್ಲಾ ಯೋಧರಿಗೂ ಸೆಲ್ಯೂಟ್ ಮಾಡುತ್ತೇನೆ. ಯೋಧರ ಕುಟುಂಬಸ್ಥರ ಕುರಿತಂತೆ ಸಂತಾಪ ಸೂಚಿಸುತ್ತೇನೆಂದು ಟ್ವಿಟರ್ ನಲ್ಲಿ ಮೋದಿಯವರು ಹೇಳಿದ್ದರು.

ಇದೇ ರೀತಿಯಾಗಿ ಪಠಾಣ್ ಕೋಟ್ ದಾಳಿ ನಡೆದಾಗಲು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದರು. ಇದರಿಂದ ಏನಾಯಿತು? ಪ್ರತೀಕಾರ ತೀರಿಸಿಕೊಳ್ಳುವ ಬದಲು ಅದೇ ರಾಷ್ಟ್ರದ ಜೊತೆಗೆ ಉತ್ತಮ ಸಂಬಂಧ ಹೊಂದಲು ಪ್ರಯತ್ನಗಳನ್ನು ನಡೆಸಲಾಯಿತು. ಪಠಾಣ್ ಕೋಟ್ ದಾಳಿ ವೇಳೆ ಯೋಧರ ತ್ಯಾಗ ಇಂದು ವ್ಯರ್ಥವಾಗಿದೆ. ಪಠಾಣ್ ಕೋಟ್ ದಾಳಿ ನಡೆದಾಗಲೂ ಪಾಕಿಸ್ತಾನಕ್ಕೆ ಸೂಕ್ತ ಪಾಠವನ್ನು ಕಲಿಸಲಾಗುತ್ತದೆ ಎಂದು ಹೇಳಲಾಗಿತ್ತು. ಈಗಲೂ ಇದೇ ಹೇಳಿಕೆಯನ್ನೇ ನೀಡಲಾಗುತ್ತಿದೆ ಎಂದು ಹೇಳಿದೆ.

ಇದೇ ವೇಳೆ ಮಹಾಭಾರತದ ಒಂದು ಭಾಗವನ್ನು ಉದಾಹರಣೆಯಾಗಿ ನೀಡಿರುವ ಶಿವಸೇನೆಯು, ದ್ರೌಪದಿಯ ಮಾನ ಹರಣ ಮಾಡಿದ ಕೀಚಕನ ವಿರುದ್ಧ ಭೀಮ ಪ್ರತೀಕಾರ ತೀರಿಸಿಕೊಂಡಿದ್ದ. ಇದೇ ರೀತಿಯಲ್ಲಿಯೇ ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ