ಸಾಂದರ್ಭಿಕ ಚಿತ್ರ 
ದೇಶ

ಪ್ರತ್ಯೇಕತಾವಾದಿಗಳಿಗೆ ಮುಖಭಂಗ: ಸೇನೆ ಸೇರಲು ಸಾಲುಗಟ್ಟಿ ನಿಂತ ಕಾಶ್ಮೀರಿ ಯುವಕರು

ನೆ ಮತ್ತು ಪೊಲೀಸ್ ಇಲಾಖೆಗೆ ಬುಧವಾರ ನಡೆದ ನೇಮಕಾತಿ ರ್ಯಾಲಿಗಳಲ್ಲಿ ಕಾಶ್ಮೀರದ ನೂರಾರು ಯುವಕರು ಭಾಗವಹಿಸುವ ಮೂಲಕ, ಕಾಶ್ಮೀರವು....

ಶ್ರೀನಗರ: ಸೇನೆ ಮತ್ತು ಪೊಲೀಸ್ ಇಲಾಖೆಗೆ ಬುಧವಾರ ನಡೆದ ನೇಮಕಾತಿ ರ್ಯಾಲಿಗಳಲ್ಲಿ ಕಾಶ್ಮೀರದ ನೂರಾರು ಯುವಕರು ಭಾಗವಹಿಸುವ ಮೂಲಕ, ಕಾಶ್ಮೀರವು ಭಾರತದಿಂದ ಪ್ರತ್ಯೇಕಗೊಳ್ಳಬೇಕು ಎನ್ನುತ್ತಿರುವ ಪ್ರತ್ಯೇಕತಾವಾದಿಗಳ ಕರೆಗೆ ತಿರುಗೇಟು ನೀಡಿದ್ದಾರೆ.

ಭದ್ರತಾ ಪಡೆಗಳು ನಡೆಸುವ ನೇಮಕಾತಿ ರ್‍ಯಾಲಿಯನ್ನು ಬಹಿಷ್ಕರಿಸುವಂತೆ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿ ಕರೆ ನೀಡಿದ್ದಾರೆ. ಆದರೆ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಡೆದ ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಸುಮಾರು  600 ಯುವಕರು ಪಾಲ್ಗೊಂಡಿದ್ದರು.

ಭಾರತೀಯ ಸೇನೆಯಲ್ಲಿ ಯೋಧರಾಗಿ ಹಾಗೂ ಗುಮಾಸ್ತರಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಯುವಕರನ್ನು ನೇಮಿಸಿಕೊಳ್ಳಲು ಈ ರ್‍ಯಾಲಿ ಆಯೋಜಿಸಲಾಗಿತ್ತು. ನೇಮಕಾತಿ ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಇಚ್ಛೆ ವ್ಯಕ್ತಪಡಿಸಿ 12 ಸಾವಿರ ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದಾರೆ.

ಕೇವಲ ಶೇ.5 ರಷ್ಟು ಜನರಿಗೆ ಮಾತ್ರ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುವುದು ಬೇಕಾಗಿರುವುದು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT