ಆಂಧ್ರ ಪ್ರದೇಶದಲ್ಲಿ ಪ್ರವಾಹ (ಸಂಗ್ರಹ ಚಿತ್ರ) 
ದೇಶ

ಭಾರಿ ಮಳೆ: ಆಂಧ್ರ ಪ್ರದೇಶದಲ್ಲಿ ಪ್ರವಾಹಕ್ಕೆ 8 ಬಲಿ

ಕಳೆದ 3 ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿವಿಧ ಪ್ರಕರಣಗಳಲ್ಲಿ ಈ ವರೆಗೂ 8 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಮರಾವತಿ: ಕಳೆದ 3 ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿವಿಧ ಪ್ರಕರಣಗಳಲ್ಲಿ ಈ ವರೆಗೂ 8 ಮಂದಿ ಬಲಿಯಾಗಿದ್ದಾರೆ  ಎಂದು ತಿಳಿದುಬಂದಿದೆ.

ಪ್ರಮುಖವಾಗಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ತತ್ತರಿಸಿ ಹೋಗಿದ್ದು, 2 ಸಾವಿರಕ್ಕೂ ಅಧಿಕ ಮನೆಗಳು ನೀರಿನಲ್ಲಿ ಮುಳಗಡೆಯಾಗಿವೆ. ಅಂತೆಯೇ 5  ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದು, ಎನ್ ಡಿಆರ್ ಎಫ್ ತಂಡದ ನೆರವಿನ ಮೂಲಕ ಇವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೇವಲ  ಗುಂಟೂರು ಮಾತ್ರವಲ್ಲದೆ ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಜಂಟಿ ರಾಜಧಾನಿ ಹೈದರಾಬಾದ್ ಕೂಡ ಸತತ ಮಳೆಯಿಂದಾಗಿ ನಲುಗಿ ಹೋಗಿದ್ದು, ಇಲ್ಲಿನ ಶಾಲಾಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ.

ಇಲ್ಲಿನ ತಗ್ಗು ಪ್ರದೇಶದಲ್ಲಿರು ಶಾಲಾ ಕಾಲೇಜು ಆವರಣದಲ್ಲಿ ಮಂಡಿಯವರೆಗೂ ನೀರು ನಿಂತಿದ್ದು, ಇದೇ ಕಾರಣಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಹೈದರಬಾದ್  ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಹುಸೇನ್ ಸಾಗರ್ ನಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಸಮೀಪದ ಒಳಚರಂಡಿಗಳೆಲ್ಲವೂ ತುಂಬಿ ರಸ್ತೆ ಮೇಲೆ ಉಕ್ಕಿ  ಹರಿಯುತ್ತಿವೆ. ಅಂತೆಯೇ ಇದೇ ಕೆರ ಸಮೀಪದ ಮೂರು ಪಾರ್ಕ್ ಗಳನ್ನು ಮುಂಜಾಗ್ರತಾ ಕ್ರಮವಾಗಿ ಜಿಹೆಚ್ಎಂಸಿ ಮುಚ್ಚಿದೆ.

ಅಂತೆಯೇ ಮಳೆಯಿಂದಾಗಿ ಸಿಕಿಂದರಾಬಾದ್ ಹಾಗೂ ಗುಂಟೂರು ನಡುವಿನ ರೈಲ್ವೇ ಮಾರ್ಗ ಹಾನಿಗೊಳಗಾಗಿದ್ದು, ಈ ಮಾರ್ಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಇಲ್ಲಿ ಯಾವುದೇ  ರೈಲುಗಳ ಸಂಚರಿಸುತ್ತಿಲ್ಲ. ಈ ಮಾರ್ಗದ ಎಲ್ಲ ರೈಲುಗಳನ್ನು ಬೇರೆ ಮಾರ್ಗಕ್ಕೆ ವರ್ಗಾಯಿಸಲಾಗಿದೆ. ಇನ್ನು ಕ್ರೊಸೂರು ಬಳಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಪಿಎಸ್ ಆರ್ ಟಿಸಿ ಬಸ್ ನಲ್ಲಿದ್ದ  ಸುಮಾರು 35 ಪ್ರಯಾಣಿಕರನ್ನು ಸ್ಥಳೀಯ ಗ್ರಾಮಸ್ಥರು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT