ಕೇವಲ 36 ರಾಫೆಲ್ ಜೆಟ್ ಖರೀದಿಗೆ ಒಪ್ಪಂದ: ರಾಫೆಲ್ ಜೆಟ್ ಒಪ್ಪಂದ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಕ್ಪ್ರಹಾರ 
ದೇಶ

ಕೇವಲ 36 ರಾಫೆಲ್ ಜೆಟ್ ಖರೀದಿಗೆ ಒಪ್ಪಂದ: ರಾಫೆಲ್ ಜೆಟ್ ಒಪ್ಪಂದ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಕ್ಪ್ರಹಾರ

ಸೆ.23 ರಂದು ಭಾರತ- ಫ್ರಾನ್ಸ್ ನಡುವೆ ನಡೆದ ರಾಫೆಲ್ ಜೆಟ್ ಖರೀದಿ ಒಪ್ಪಂದದ ವಿಚಾರವಾಗಿ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಸೆ.23 ರಂದು ಭಾರತ- ಫ್ರಾನ್ಸ್ ನಡುವೆ ನಡೆದ ರಾಫೆಲ್ ಜೆಟ್ ಖರೀದಿ ಒಪ್ಪಂದದ ವಿಚಾರವಾಗಿ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಯುಪಿಎ ಸರ್ಕಾರ ಅಸ್ತಿತ್ವದಲ್ಲಿದ್ದಾಗ 126 ರಾಫೆಲ್ ಜೆಟ್ ಗಾಲ ಖರೀದಿಯನ್ನು ಅಂತಿಮಗೊಳಿಸಲಾಗಿತ್ತು. ಆದರೆ ಬಿಜೆಪಿ ಅದನ್ನು ಕೇವಲ 36 ಕ್ಕೆ ಇಳಿಸಿದೆ. ಭಾರತೀಯ ವಾಯು ಸೇನೆ ಪರಿಸ್ಥಿತಿ ಅಸ್ಥಿರವಾಗಿದ್ದು ಸೂಕ್ಷ್ಮವಾಗಿದೆ ಇಂತಹ ಪರಿಸ್ಥಿತಿಯಲ್ಲೂ ಬಿಜೆಪಿ ಖರೀದಿಸಬೇಕಿದ್ದ ಅತ್ಯಾಧುನಿಕ ರಾಫೆಲ್ ಜೆಟ್ ಗಳ ಸಂಖ್ಯೆಯನ್ನು 36 ಕ್ಕೆ ಇಳಿಸಿದೆ ಎಂದು ಕಾಂಗ್ರೆಸ್ ನಾಯಕ ಮಾಜಿ ರಕ್ಷಣಾ ಸಚಿವ ಎಕೆ ಆಂಟೋನಿ ಆರೋಪಿಸಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತೀಯ ವಾಯು ಸೇನೆಗೆ ಕನಿಷ್ಠ 126 ಅತ್ಯಾಧುನಿಕ ಫೈಟರ್ ಜೆಟ್ ಗಳು ಅಗತ್ಯವಿತ್ತು. ಆದರೆ ಈಗ ಅನುಮತಿ ನೀಡಲಾಗಿರುವುದು ಕೇವಲ 42 ಕ್ಕೆ ಮಾತ್ರವಾಗಿದ್ದು ವಾಯುಪಡೆಯ ಸ್ಥಿತಿ ಹದಗೆಡುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಅತ್ಯಾಧುನಿಕ ಫೈಟರ್ ಜೆಟ್ ಗಳ 32 ತುಕಡಿಗಳು ಅಗತ್ಯವಿದೆ. 2022 ರ ವೇಳೆಗೆ ಇದು 25 ಕ್ಕೆ ಇಳಿಕೆಯಾಗಲಿದೆ ಎಂದು ಮಾಜಿ ರಕ್ಷಣಾ ಸಚಿವರು ಮಾಹಿತಿ ನೀಡಿದ್ದಾರೆ. ಒಂದೆಡೆ ಪಾಕಿಸ್ತಾನ, ಚೀನಾ ತಮ್ಮ ಸೇನಾ ಸಾಮರ್ಥ್ಯಗಳನ್ನು ಹೆಚ್ಚಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಭಾರತದ ಅಂತರ ಹೆಚ್ಚಾಗುತ್ತಿದೆ. ಇದನ್ನು ಸರಿದೂಗಿಸುವುದಕ್ಕೆ ಕೇಂದ್ರ ಸರ್ಕಾರ ಯಾವ ರೀತಿಯ ಯೋಜನೆ ರೂಪಿಸಿದೆ ಎಂದು ರಕ್ಷಣಾ ಸಚಿವ ಎಕೆ ಆಂಟನಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT