ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

ಪಾಕಿಸ್ತಾನಕ್ಕೆ ಆತ್ಮಹತ್ಯಾ ದಾಳಿಕೋರರನ್ನು ಕಳಿಸಿ: ಎಂಎನ್ ಎಸ್ ಗೆ ಸಮಾಜವಾದಿ ಪಕ್ಷದ ಸವಾಲು

ಕಾಶ್ಮೀರದ ಉರಿ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನಿ ಕಲಾವಿದರಿಗೆ ಭಾರತ ಬಿಟ್ಟು ಹೋರಾಡಲು ಗಡುವು ವಿಧಿಸಿದ್ದ ಎಂಎನ್ ಎಸ್ ಕ್ರಮಕ್ಕೆ ಸಮಾಜವಾದಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮುಂಬೈ: ಕಾಶ್ಮೀರದ ಉರಿ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನಿ ಕಲಾವಿದರಿಗೆ ಭಾರತ ಬಿಟ್ಟು ಹೋರಾಡಲು ಗಡುವು ವಿಧಿಸಿದ್ದ ಎಂಎನ್ ಎಸ್ ಕ್ರಮಕ್ಕೆ ಸಮಾಜವಾದಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪಾಕ್ ಕಲಾವಿದರಿಗೆ ದೇಶ ಬಿಟ್ಟು ಹೋಗುವಂತೆ ಸೂಚಿಸಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ( ಎಂಎನ್ಎಸ್) ಗೆ ಸವಾಲು ಹಾಕಿರುವ ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ, ಧೈರ್ಯವಿದ್ದರೆ ಎಂಎನ್ ಎಸ್ ಪಾಕಿಸ್ತಾನಕ್ಕೆ ಆತ್ಮಹತ್ಯಾ ದಾಳಿ ನಡೆಸುವವರನ್ನು ಕಳಿಸಿ ಪಾಕಿಸ್ತಾನದ ವಿರುದ್ಧ ಸೇಡು ತೀರಿಸಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆಗೆ ಧೈರ್ಯವಿದ್ದರೆ ಲಾಹೋರ್ ಹಾಗೂ ಕರಾಚಿಗೆ ಆತ್ಮಹತ್ಯಾ ದಾಳಿಕೋರರನ್ನು ಕಳಿಸಿ ಪಾಕಿಸ್ತಾನದ ವಿರುದ್ಧ ಹೋರಾಡಲಿ ಅಥವಾ ಪಾಕಿಸ್ತಾನಿ ಕಲಾವಿದರಿಗೆ ಬೆದರಿಕೆ ಹಾಕುವುದನ್ನು ನಿಲ್ಲಿಸಲಿ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಕ್ಸಲ್ ಸಮಸ್ಯೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇನ್ನು ಪಾಕಿಸ್ತಾನದ ಬಗ್ಗೆ ಎಂಎನ್ ಎಸ್ ಮಾತನಾಡುತ್ತಿದೆ ಎಂದು ಸಮಾಜವಾದಿ ಪಕ್ಷ ಎಂಎನ್ ಎಸ್ ಕ್ರಮವನ್ನು ಖಂಡಿಸಿದೆ. ಉರಿಯಲ್ಲಿರುವ ಸೇನಾ ಕಚೇರಿ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಎಂಎನ್ಎಸ್ ಭಾರತದಲ್ಲಿರುವ ಪಾಕಿಸ್ತಾನಿ ಕಲಾವಿದರಿಗೆ ದೇಶ ಬಿಡಲು ಸೂಚಿಸಿ 48 ಗಂಟೆಗಳ ಗಡುವು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT