ಛೋಟಾ ರಾಜನ್ 
ದೇಶ

1993ರ ಮುಂಬೈ ಸ್ಫೋಟ: ಆರೋಪಿಯ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ

1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ನಟ ಸಂಜಯ್ ದತ್ ಗೆ ಎಕೆ-56 ರೈಫಲ್ ಒದಗಿಸಿದ...

ನವದೆಹಲಿ: 1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ನಟ ಸಂಜಯ್ ದತ್ ಗೆ ಎಕೆ-56 ರೈಫಲ್ ಒದಗಿಸಿದ ಆರೋಪಿ ಹನೀಫ್ ಕಡಾವಾಲಾ ಹತ್ಯೆ ಸಂಬಂಧ ಸಿಬಿಐ ತನಿಖೆ ಕೈಗೆತ್ತಿಕೊಂಡಿದ್ದು, ದರೋಡೆಕೋರ ಛೋಟಾ ರಾಜನ್ ಮತ್ತು ಆತನ ಸಹಚರರ ವಿರುದ್ಧ ಕೇಸು ದಾಖಲಿಸಿದೆ.
''ಕಡಾವಾಲಾ ಹತ್ಯೆ ಪ್ರಕರಣ ಕೇಸಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಸಂಸ್ಥೆಯ ವಕ್ತಾರ ಆರ್.ಕೆ.ಗೌರ್ ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ ರಾಜ್ಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಲ್ಲಿಂದ ಸಿಬಿಐ ತನಿಖೆ ಕೈಗೆತ್ತಿಕೊಳ್ಳಲಿದೆ.
ಕಡಾವಾಲಾ ಕೊಲೆ ಕೇಸಿಗೆ ಸಂಬಂಧಪಟ್ಟಂತೆ ಛೋಟಾ ರಾಜನ್, ಆತನ ಸಹಚರ ಗುರು ಸತಮ್ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಿಸಲಾಗಿತ್ತು. 
1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಬಳಸಲಾದ ಶಸ್ತ್ರಾಸ್ತ್ರಗಳನ್ನು ಕಡಾವಾಲಾ ಟೈಗರ್ ಮೆನನ್ ಸೂಚನೆ ಮೇರೆಗೆ ಮುಂಬೈಗೆ ಸಾಗಿಸಿದ್ದ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT