ನಟವರ್ ಸಿಂಗ್ 
ದೇಶ

ಕಾಶ್ಮೀರ ಸಮಸ್ಯೆಗೆ ಗಡಿನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿಸುವುದೇ ಪರಿಹಾರ: ನಟವರ್ ಸಿಂಗ್

ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಹಾಗೂ ಭಾರತದ ವೈಷಮ್ಯಕ್ಕೆ ಅಂತ್ಯ ಹಾಡಲು ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿ...

ನವದೆಹಲಿ: ಉರಿ ಸೆಕ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಾಗೂ ಯೋಧರ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಹಾಗೂ ಭಾರತದ ವೈಷಮ್ಯಕ್ಕೆ ಅಂತ್ಯ ಹಾಡಲು ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿ ಪರಿವರ್ತಿಸುವುದೊಂದೇ ಮಾರ್ಗ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸದ್ಯಕ್ಕೆ ಭಾರತ- ಪಾಕ್ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಇರುವುದು ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿ ಮಾರ್ಪಾಡು ಮಾಡುವುದೊಂದೇ ದಾರಿ ಎಂದು ನಟವರ್ ಸಿಂಗ್ ಹೇಳಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದೊಂದಿಗಿನ ವಿವಾದವನ್ನು ಬಗೆಹರಿಸಿಕೊಳ್ಳಲು ಇದ್ದ ಎಲ್ಲಾ ಮಾರ್ಗಗಳನ್ನೂ ಅನುಸರಿಸಿ ಆಗಿದೆ, ಈಗ ಕಾಣುತ್ತಿರುವುದು ಇದೊಂದೇ ಮಾರ್ಗ, ಇದನ್ನು ನಾನು ಈಗ ಹೇಳುತ್ತಿಲ್ಲ 10- 15 ವರ್ಷಗಳಿಂದಲೂ ಹೇಳುತ್ತಿದ್ದೇನೆ ಎಂದು ನಟವರ್ ಸಿಂಗ್ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಸಹ ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿಸುವುದೊಂದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕಾಶ್ಮೀರ ಸಮಸ್ಯೆ ಭಾರತದ ಅತ್ಯಂತ ಜಟಿಲ ಸಮಸ್ಯೆಯಾಗಿದ್ದು ಕಾಲಕ್ರಮೇಣ ಅಂತಾರಾಷ್ಟ್ರೀಯ ವ್ಯವಹಾರಗಳೊಂದಿಗೆ ಸೇರಿ ಹಲವು ಜನರು ಈ ಬಗ್ಗೆ ಆಸಕ್ತಿ ತೋರುತ್ತಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವುದಕ್ಕೆ ನಾವು 70 ವರ್ಷ ಯತ್ನಿಸಿದ್ದೇವಾದರೂ ಈ ವರೆಗೂ ಸಮಸ್ಯೆ ಬಗೆಹರಿದಿಲ್ಲ. ಈ ನಡುವೆ ಪಾಕಿಸ್ತಾನ ಸಹ ಅಣ್ವಸ್ತ್ರ ರಾಷ್ಟ್ರವಾಗಿದ್ದು ಯುದ್ಧ ಮಾಡುವುದು ಸೂಕ್ತವಲ್ಲ ಎಂದು ನಟವರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT