ನಟವರ್ ಸಿಂಗ್ 
ದೇಶ

ಕಾಶ್ಮೀರ ಸಮಸ್ಯೆಗೆ ಗಡಿನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿಸುವುದೇ ಪರಿಹಾರ: ನಟವರ್ ಸಿಂಗ್

ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಹಾಗೂ ಭಾರತದ ವೈಷಮ್ಯಕ್ಕೆ ಅಂತ್ಯ ಹಾಡಲು ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿ...

ನವದೆಹಲಿ: ಉರಿ ಸೆಕ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಾಗೂ ಯೋಧರ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಹಾಗೂ ಭಾರತದ ವೈಷಮ್ಯಕ್ಕೆ ಅಂತ್ಯ ಹಾಡಲು ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿ ಪರಿವರ್ತಿಸುವುದೊಂದೇ ಮಾರ್ಗ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸದ್ಯಕ್ಕೆ ಭಾರತ- ಪಾಕ್ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಇರುವುದು ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿ ಮಾರ್ಪಾಡು ಮಾಡುವುದೊಂದೇ ದಾರಿ ಎಂದು ನಟವರ್ ಸಿಂಗ್ ಹೇಳಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದೊಂದಿಗಿನ ವಿವಾದವನ್ನು ಬಗೆಹರಿಸಿಕೊಳ್ಳಲು ಇದ್ದ ಎಲ್ಲಾ ಮಾರ್ಗಗಳನ್ನೂ ಅನುಸರಿಸಿ ಆಗಿದೆ, ಈಗ ಕಾಣುತ್ತಿರುವುದು ಇದೊಂದೇ ಮಾರ್ಗ, ಇದನ್ನು ನಾನು ಈಗ ಹೇಳುತ್ತಿಲ್ಲ 10- 15 ವರ್ಷಗಳಿಂದಲೂ ಹೇಳುತ್ತಿದ್ದೇನೆ ಎಂದು ನಟವರ್ ಸಿಂಗ್ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಸಹ ಗಡಿ ನಿಯಂತ್ರಣ ರೇಖೆಯನ್ನು ಅಂತಾರಾಷ್ಟ್ರೀಯ ಗಡಿಯನ್ನಾಗಿಸುವುದೊಂದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕಾಶ್ಮೀರ ಸಮಸ್ಯೆ ಭಾರತದ ಅತ್ಯಂತ ಜಟಿಲ ಸಮಸ್ಯೆಯಾಗಿದ್ದು ಕಾಲಕ್ರಮೇಣ ಅಂತಾರಾಷ್ಟ್ರೀಯ ವ್ಯವಹಾರಗಳೊಂದಿಗೆ ಸೇರಿ ಹಲವು ಜನರು ಈ ಬಗ್ಗೆ ಆಸಕ್ತಿ ತೋರುತ್ತಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವುದಕ್ಕೆ ನಾವು 70 ವರ್ಷ ಯತ್ನಿಸಿದ್ದೇವಾದರೂ ಈ ವರೆಗೂ ಸಮಸ್ಯೆ ಬಗೆಹರಿದಿಲ್ಲ. ಈ ನಡುವೆ ಪಾಕಿಸ್ತಾನ ಸಹ ಅಣ್ವಸ್ತ್ರ ರಾಷ್ಟ್ರವಾಗಿದ್ದು ಯುದ್ಧ ಮಾಡುವುದು ಸೂಕ್ತವಲ್ಲ ಎಂದು ನಟವರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT