ಇಶ್ರತ್ ಜಹಾನ್ ಪ್ರಕರಣ (ಸಂಗ್ರಹ ಚಿತ್ರ) 
ದೇಶ

ಇಶ್ರತ್ ಜಹಾನ್ ಪ್ರಕರಣದ ಕಡತ ನಾಪತ್ತೆ: ಗೃಹ ಇಲಾಖೆಯಿಂದ ಎಫ್ ಐಆರ್ ದಾಖಲು

ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಕಡತ ನಾಪತ್ತೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆ ಭಾನುವಾರ ಎಫ್ ಐಆರ್ ದಾಖಲು ಮಾಡಿದೆ.

ನವದೆಹಲಿ: ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಕಡತ ನಾಪತ್ತೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆ ಭಾನುವಾರ ಎಫ್ ಐಆರ್ ದಾಖಲು ಮಾಡಿದೆ.

ಪ್ರಕರಣ ಸಂಬಂಧ ಇಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಗೃಹ ಇಲಾಖೆ ಎಫ್ ಐಆರ್ ದಾಖಲಿಸಿದ್ದು, ಕಡತ ನಾಪತ್ತೆ ಹಿಂದಿನ ಕಾಣದ ಕೈಗಳ ಕುರಿತು ತನಿಖೆ ನಡೆಸುವಂತೆ  ಅಧಿಕೃತವಾಗಿ ಪ್ರಕರಣ ದಾಖಲಿಸಿದೆ. ಈ ಹಿಂದೆ ಇದೇ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಬಿ.ಕೆ.ಪ್ರಸಾದ್ ಅವರ ನೇತೃತ್ವದಲ್ಲಿ ಏಕ ವ್ಯಕ್ತಿ  ತನಿಖಾ ಸಮಿತಿಯನ್ನು ರಚನೆ ಮಾಡಿತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದ ಈ ಹೈ ಪ್ರೊಫೈಲ್ ಕೇಸ್ ನ ಪ್ರಮುಖ ಕಡತಗಳು ಯುಪಿಎ-2 ಆಡಳಿತಾವಧಿಯಲ್ಲಿ ನಾಪತ್ತೆಯಾಗಿದ್ದವು. ಇದೀಗ ಈ  ಸಂಬಂಧ ಕೇಂದ್ರ ಗೃಹ ಇಲಾಖೆ ಎಫ್ ಐಆರ್ ದಾಖಲಿಸಿದೆ. ಈ ಸಂಬಂದ ಸಂಸತ್ ಭವನದ ಪೊಲೀಸರಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 409ರಡಿಯಲ್ಲಿ ಅಧಿಕೃತವಾಗಿ ದೂರು  ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.

ಕಳೆದ ಮಾರ್ಚ್ 10ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು,ಇಶ್ರತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ದಾಖಲೆಗಳು ಸಚಿವಾಲಯದಿಂದ ಕಾಣೆಯಾಗಿವೆ  ಎಂದು ಲೋಕಸಭೆಯಲ್ಲಿ ಹೇಳಿದ್ದರು. "ಅಂದಿನ ಗೃಹ ಕಾರ್ಯದರ್ಶಿ 2009ರಲ್ಲಿ ಅಟಾರ್ನಿ ಜನರಲ್ ಅವರಿಗೆ ಬರೆದ ಎರಡು ಪತ್ರಗಳು ಕಾಣೆಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಂದಿನ ಅಟಾರ್ನಿ ಜನರಲ್ ಎರಡು ಅಫಿಡವಿಟ್ ಗಳನ್ನು ನಮೂದಿಸಿದ್ದಾರೆ. ಅವುಗಳು ಲಭ್ಯವಿಲ್ಲ" ಎಂದು ಇಶ್ರತ್ ಜಹಾನ್ ನಕಲಿ ಎಂಕೌಂಟರ್ ಪ್ರಕರಣದ ಕುರಿತು ಲೋಕಸಭೆಯಲ್ಲಿ  ಚರ್ಚಿಸುವಾಗ ರಾಜನಾಥ್ ಸಿಂಗ್ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT