ಉತ್ತರ ಪ್ರದೇಶದಲ್ಲಿ 10 ರೂ. ನಾಣ್ಯ ನಿರಾಕರಿಸಿದರೆ ಅದು ರಾಷ್ಟ್ರದ್ರೋಹ! 
ದೇಶ

ಉತ್ತರ ಪ್ರದೇಶದಲ್ಲಿ 10 ರೂ. ನಾಣ್ಯ ನಿರಾಕರಿಸಿದರೆ ಅದು ರಾಷ್ಟ್ರದ್ರೋಹ!

10 ರೂ ನಾಣ್ಯವನ್ನು ಸ್ವೀಕರಿಸಲು ಹಿಂಜರಿದರೆ ಅಂಥವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ಆಗ್ರಾ: ಉತ್ತರ ಪ್ರದೇಶದಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಸುಳ್ಳು ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, 10 ರೂ ನಾಣ್ಯವನ್ನು ಸ್ವೀಕರಿಸಲು ಹಿಂಜರಿದರೆ ಅಂಥವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

10 ರೂಪಾಯಿ ನಾಣ್ಯ ಚಲಾವಣೆಯಲ್ಲಿಲ್ಲವೆಂಬ ಸಂದೇಶಗಳು ವಾಟ್ಸ್ ಆಪ್ ನಲ್ಲಿ ಹರಿದಾಡುತ್ತಿದ್ದ ಪರಿಣಾಮ ಕಳೆದ 2-3 ತಿಂಗಳಿನಿಂದ 10 ರೂ ನಾಣ್ಯ ಚಲಾವಣೆಗೆ ಹೊಡೆತಬಿದ್ದಿತ್ತು. ಇದಕ್ಕೆ ಉತ್ತಮ ಉದಾಹರಣೆ ಎಂಬಂತೆ ಪುಲ್ಕಿತ್ ಶರ್ಮಾ ಎಂಬುವವರ ಬಳಿ ಕಳೆದ 2-3 ತಿಂಗಳಿನಿಂದ ಸಂಗ್ರಹಿಸಿಟ್ಟಿದ್ದ 10 ರೂ ನಾಣ್ಯಗಳ ರಾಶಿ ಇದೆ. 10 ರೂ ನಾಣ್ಯಗಳನ್ನು ನಿರಾಕರಿಸುವವರ ವಿರುದ್ಧ ಜಿಲ್ಲಾಡಳಿತ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ ಬಳಿಕ ಪುಲ್ಕಿತ್ ಶರ್ಮಾ ತಮ್ಮ ಬಳಿ ಇರುವ ನಾಣ್ಯಗಳನ್ನು ಸುಲಭವಾಗಿ ಚಲಾವಣೆ ಮಾಡಬಹುದಾಗಿದೆ.

10 ರೂ ನಾಣ್ಯ ರಾಷ್ಟ್ರೀಯ ಕರೆನ್ಸಿಯಾಗಿದ್ದು, ಅದನ್ನು ನಿರಾಕರಿಸುವ ಹಕ್ಕು ಯಾರಿಗೂ ಇರುವುದಿಲ್ಲ. ಆರ್ ಬಿಐ ನ ನಿಯಮಗಳ ಪ್ರಕಾರ ಭಾರತದ ಕರೆನ್ಸಿಯನ್ನು ನಿರಾಕರಿಸುವವರ ವಿರುದ್ಧ ಐಪಿಸಿ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣ ದಾಖಲಿಸಬಹುದಾಗಿದೆ ಎಂದು ಆಗ್ರಾದ ಜಿಲ್ಲಾಧಿಕಾರಿ ಮಾಸೂಮ್ ಅಲಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT