ಸಾಂದರ್ಭಿಕ ಚಿತ್ರ 
ದೇಶ

ಪವಿತ್ರ ಗ್ರಂಥಗಳ ಹರಿದ ದುಷ್ಕರ್ಮಿಗಳು; ಜಲಂಧರ್ ನಲ್ಲಿ ವ್ಯಾಪಕ ಪ್ರತಿಭಟನೆ

ಸಿಖ್ಖರ ಪವಿತ್ರ ಗ್ರಂಥ 'ಗುರು ಗ್ರಂಥ್ ಸಾಹೀಬ್' ಹಾಗೂ 'ಭಗವದ್ಗೀತೆ'ಯ ಹಾಳೆಗಳು ಕಾಲುವೆಯೊಂದರಲ್ಲಿ ಸಿಕ್ಕ ಹಿನ್ನೆಲೆಯಲ್ಲಿ ಜಲಂಧರ್ ನ ಕಪುರ್ಥಾಲಾ ಚೌಕ್ ಪ್ರದೇಶದಲ್ಲಿ...

ಜಲಂಧರ್: ಸಿಖ್ಖರ ಪವಿತ್ರ ಗ್ರಂಥ 'ಗುರು ಗ್ರಂಥ್ ಸಾಹೀಬ್' ಹಾಗೂ 'ಭಗವದ್ಗೀತೆ'ಯ ಹಾಳೆಗಳು ಕಾಲುವೆಯೊಂದರಲ್ಲಿ ಸಿಕ್ಕ ಹಿನ್ನೆಲೆಯಲ್ಲಿ ಜಲಂಧರ್ ನ ಕಪುರ್ಥಾಲಾ ಚೌಕ್ ಪ್ರದೇಶದಲ್ಲಿ ಹಲವು ಪ್ರತಿಭಟನೆಗಳು ಸೋಮವಾರ ಆರಂಭವಾಗಿದೆ.

ಸಿಖ್ ತಲ್ಮೆಲ್ ಸಮಿತಿ ಹಾಗೂ ಕೆಲಸ ಹಿಂದೂ ಪರ ಸಂಘಟನೆಗಳು ಪ್ರತಿಭಟನೆಗಿಳಿದಿದ್ದು ಆಕ್ರೋಶವನ್ನು ವ್ಯಕ್ತಪಡಿಸುತ್ತಿವೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗದಂತೆ ಎಚ್ಚರಿಕೆ ವಹಿಸಿರುವ ಅಲ್ಲಿನ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

ಕೆಲ ದುಷ್ಕರ್ಮಿಗಳು 'ಗುರು ಗ್ರಂಥ್ ಸಾಹೀಬ್' ಮತ್ತು 'ಭಗವದ್ಗೀತೆ' ಪುಸ್ತಕದ 200ಕ್ಕೂ ಹೆಚ್ಚು ಹಾಳೆಗಳನ್ನು ಹರಿದಿದ್ದು, ಹಾಳೆಗಳನ್ನು ಕಪುರ್ಥಲಾ ಚೌಕ್'ನ ಶೇರ್ ಸಿಂಗ್ ಕಾಲೋನಿ ಬಳಿಯಿರುವ ಬಿಸ್ತ್-ಡೊಬ್ ಕಾಲುವೆಯೊಂದಕ್ಕೆ ಎಸೆದಿದ್ದಾರೆ. ಹಾಳೆಗಳು ಕಾಲುವೆಯಲ್ಲಿ ತೇಲುತ್ತಿದ್ದುದ್ದನ್ನು ಸ್ಥಳೀಯರು ನೋಡಿದ್ದಾರೆ. ಕೂಡಲೇ ಕಾಲುವೆಗೆ ಇಳಿದು ಹಾಳೆಗಳನ್ನು ತೆಗೆಯಲು ಆರಂಭಿಸಿದ್ದರು. ಸುದ್ದಿ ಹರಡುತ್ತಿದ್ದಂತೆ, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಗೆ ಪಂಜಾಬ್ ಉಪ ಮುಖ್ಯಮಂತ್ರಿ ಸುಖ್ಬೀರ್ ಬಾದಲ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT