ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಶೂ ದಾಳಿ 
ದೇಶ

ಶೂ ದಾಳಿಯಿಂದ ನಾನು ಹೆದರುವುದಿಲ್ಲ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್'ಎಸ್ಎಸ್ ಕಡೆಯ ಜನರೇ ನನ್ನ ಮೇಲೆ ದಾಳಿ ಮಾಡಿದ್ದು, ಈ ರೀತಿಯ ದಾಳಿಗಳಿಗೆ ನಾನು ಹೆದರುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ಸೀತಾಪುರ: ಬಿಜೆಪಿ ಮತ್ತು ಆರ್'ಎಸ್ಎಸ್ ಕಡೆಯ ಜನರೇ ನನ್ನ ಮೇಲೆ ದಾಳಿ ಮಾಡಿದ್ದು, ಈ ರೀತಿಯ ದಾಳಿಗಳಿಗೆ ನಾನು ಹೆದರುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.

ಉತ್ತರಪ್ರದೇಶದ  ಸೀತಾಪುರದಲ್ಲಿ ರಾಹುಲ್ ಗಾಂಧಿಯವರು ಕಿಸಾನ್ ಯಾತ್ರೆಯನ್ನು ಆರಂಭಿಸಿದ್ದರು. ತೆರೆದ ವಾಹನವೊಂದರಲ್ಲಿ ರಾಹುಲ್ ಪ್ರಯಾಣಿಸುತ್ತಿದ್ದರು. ಈ ವೇಳೆ ಕಿಡಿಗೇಡಿಯೊಬ್ಬ ರಾಹುಲ್ ಮೇಲೆ ಶೂವನ್ನು ಎಸೆದಿದ್ದ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಹುಲ್, ನಾನು ತೆರೆದ ವಾಹನದಲ್ಲಿ ಚಲಿಸುತ್ತಿದ್ದೆ. ಈ ವೇಳೆ ಶೂವೊಂದನ್ನು ನನ್ನ ಮೇಲೆ ಎಸೆಯಲಾಯಿತು. ಆದರೆ, ಅದು ನನ್ನ ಮೇಲೆ ಬೀಳಲಿಲ್ಲ. ಬಿಜೆಪಿ ಹಾಗೂ ಆರ್'ಎಸ್ಎಸ್ ಕಡೆಯ ಜನರೇ ನನ್ನ ಮೇಲೆ ದಾಳಿ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಬಿಜೆಪಿ ಹಾಗೂ ಆರ್'ಎಸ್ಎಸ್ ನನ್ನ ಮೇಲೆ ಎಷ್ಟು ಶೂಗಳನ್ನು ಬೇಕಾದರೂ ಎಸೆಯಲಿ. ಆದರೆ, ನನ್ನ ಹೆಜ್ಜೆಯನ್ನು ನಾನು ಹಿಂದಕ್ಕೆ ಇಡುವುದಿಲ್ಲ. ಬಿಜೆಪಿ, ಆರ್'ಎಸ್ಎಸ್'ಗೆ ನಾನು ಹೆದರುವುದಿಲ್ಲ. ಪ್ರೀತಿ ಹಾಗೂ ಸಾಮರಸ್ಯದ ಮೇಲಿನ ನನ್ನ ನಂಬಿಕೆಯನ್ನು ನಾನು ಮುಂದುವರೆಸುತ್ತೇನೆ. ನೀವು ದ್ವೇಷವನ್ನು ಮುಂದುವರೆಸುವ ಕಡೆಯೇ ಅಂಟಿಕೊಂಡಿರಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT