ಬಿಕೆ ಬನ್ಸಾಲ್ 
ದೇಶ

ಭ್ರಷ್ಟಾಚಾರ ಆರೋಪ: ಮಗನೊಂದಿಗೆ ನೇಣಿಗೆ ಶರಣಾದ ಮಾಜಿ ನಿರ್ದೇಶಕ ಬಿಕೆ ಬನ್ಸಾಲ್

ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿದ್ದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಮಾಜಿ ಮಹಾನಿರ್ದೇಶಕ ಬಿಕೆ ಬನ್ಸಾಲ್ ಅವರು ತಮ್ಮ ಪುತ್ರನೊಂದಿಗೆ

ನವದೆಹಲಿ: ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿದ್ದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಮಾಜಿ ಮಹಾನಿರ್ದೇಶಕ ಬಿಕೆ ಬನ್ಸಾಲ್ ಅವರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಪ್ರಕರಣ ಸಂಬಂಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಬನ್ಸಾಲ್ ಅವರು ಡೇಟ್ ನೋಟ್ ಬರೆದಿಟ್ಟು ದೆಹಲಿಯ ಮಧು ವಿಹಾರ್ ನಗರದಲ್ಲಿರುವ ನೀಲ್ ಕಂಠ ಅಪಾರ್ಟ್ ಮೆಂಟ್ ನ ತಮ್ಮ ಮನೆಯಲ್ಲಿ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ನಿರ್ದೇಶಕರಾಗಿದ್ದ ಬಿಕೆ ಬನ್ಸಾಲ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪವಿತ್ತು. ಕಂಪನಿಯೊಂದರಿಂದ 9 ಲಕ್ಷ ರುಪಾಯಿ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಜುಲೈ 16ರಂದು ಅವರನ್ನು ಬಂಧಿಸಲಾಗಿತ್ತು. 
ಬನ್ಸಾಲ್ ಅವರು ಡೇಟ್ ನೋಟ್ ನಲ್ಲಿ ಸಿಬಿಐ ದಾಳಿಯಿಂದ ಆಗಿರುವ ಅವಮಾನವನ್ನು ಸಹಿಸಲು ಸಾಧ್ಯವಾಗದೆ ತಾವು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಬರೆದಿದ್ದಾರೆ. ಸುದ್ದಿ ತಿಳಿದ ಕೂಡಲೇ ಅಪಾರ್ಟ್ ಮೆಂಟ್ ಗೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. 
ಬನ್ಸಾಲ್ ಬಂಧನವಾಗಿದ್ದರಿಂದ ಮನನೊಂದು ಬನ್ಸಾಲ್ ಪತ್ನಿ ಸತ್ಯಾಬಾಲ ಮತ್ತು ಮಗಳು ನೇಹಾ ಅವರು ಇದೇ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT