ಸಂಗ್ರಹ ಚಿತ್ರ 
ದೇಶ

ಉಗ್ರ ಕ್ಯಾಂಪ್ ಗಳ ಮೇಲೆ ಸೇನಾ ದಾಳಿ; ಭಾರತೀಯ ಸೇನೆಯನ್ನು ಶ್ಲಾಘಿಸಿದ ಬಿಜೆಪಿ

ಗಡಿ ನಿಯಂತ್ರಣ ರೇಖೆ ದಾಟಿ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ನಡೆಸಿದ ಭಾರತೀಯ ಯೋಧರ ಶೌರ್ಯ ಮತ್ತು ಸಾಹಸಕ್ಕೆ ಬಿಜೆಪಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಯೋತ್ಪಾದನೆ ಪ್ರಾಯೋಜಿಸುತ್ತಿರುವ ಪಾಕಿಸ್ತಾನಕ್ಕೆ ಇದೊಂದು ತಕ್ಕ ಪಾಠ ಎಂದು ಹೇಳಿದೆ.

ನವದೆಹಲಿ: ಗಡಿ ನಿಯಂತ್ರಣ ರೇಖೆ ದಾಟಿ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ನಡೆಸಿದ ಭಾರತೀಯ ಯೋಧರ ಶೌರ್ಯ ಮತ್ತು ಸಾಹಸಕ್ಕೆ ಬಿಜೆಪಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಯೋತ್ಪಾದನೆ  ಪ್ರಾಯೋಜಿಸುತ್ತಿರುವ ಪಾಕಿಸ್ತಾನಕ್ಕೆ ಇದೊಂದು ತಕ್ಕ ಪಾಠ ಎಂದು ಹೇಳಿದೆ.

ಈ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಸೈಯದ್ ಶಹನವಾಜ್ ಹುಸೇನ್ ಅವರು, ಎಲ್ಲ ಭಯೋತ್ಪಾದಕರಿಗೆ ಇದೊಂದು ಗುಣಪಾಠವಾಗಿದ್ದು, ಸ್ವಯಂ ರಕ್ಷಣೆಯ ಹಕ್ಕು  ನಮಗೂ ಇದೆ ಎಂದು ಹೇಳಿದ್ದಾರೆ.

ಕಳೆದ ರಾತ್ರಿ ಗಡಿ ನಿಯಂತ್ರಣ ರೇಖೆ ಬಳಿ ಇರುವ ಕೇಲ್ ಮತ್ತು ಭೀಮ್ ಬರ್ ಪ್ರಾಂತ್ಯಗಳ ಸುಮಾರು 6 ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದ್ದು, ಉಗ್ರ  ಕ್ಯಾಂಪ್ ಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಸುರಕ್ಷಿತವಾಗಿ ಭಾರತ ಗಡಿ ಪ್ರವೇಶಿಸಿದ್ದಾರೆ. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸೇನಾಮುಖ್ಯಸ್ಥ ರಣ್ ಬೀರ್ ಸಿಂಗ್ ಅವರು ಮಾಹಿತಿ  ನೀಡಿದ್ದು, ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದ್ದಾರೆ.

ಭಾರತೀಯ ಸೇನೆಯ ಈ ಕಾರ್ಯಾಚರಣೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT