ಜೈಶಂಕರ್ 
ದೇಶ

ವಿದೇಶಾಂಗ ಕಾರ್ಯದರ್ಶಿಯಿಂದ ಸೇನಾ ದಾಳಿ ಬಗ್ಗೆ 22 ದೇಶಗಳ ರಾಯಭಾರಿಗಳಿಗೆ ಮಾಹಿತಿ

ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ...

ನವದೆಹಲಿ: ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಯ ಬಗ್ಗೆ 22 ದೇಶಗಳ ರಾಯಭಾರಿಗಳಿಗೆ ಗುರುವಾರ ಮಾಹಿತಿ ನೀಡಿದ್ದಾರೆ. 
ಎಎನ್ಐ ವರದಿಯ ಪ್ರಕಾರ, ಪಿ 5 ರಾಷ್ಟ್ರಗಳು ಸೇರಿದಂತೆ 22 ದೇಶಗಳ ರಾಯಭಾರಿಗಳಿಗೆ ಭಾರತೀಯ ಸೇನಾ ಕಾರ್ಯಾಚರಣೆ ಬಗ್ಗೆ ಹಾಗೂ ಗಡಿ ನಿಯಂತ್ರಣ ರೇಖೆಯ ಪರಿಸ್ಥಿತಿ ಬಗ್ಗೆ ವಿದೇಶಾಂಗ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಸೇರಿದಂತೆ ಗಡಿ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪಾಕ್ ವಿರುದ್ಧ ಸೇನಾ ದಾಳಿ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ನಿನ್ನೆ ರಾತ್ರಿ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಇದ್ದ ಏಳು ಉಗ್ರರ ಶಿಬಿರಗಳ ಮೇಲೆ ಸೀಮಿತ ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು 40ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT