ರಾಜನಾಥ್ ಸಿಂಗ್ ಸೂಚನೆ ಬೆನ್ನಲ್ಲೇ: ಗಡಿ ಗ್ರಾಮಗಳ ಸ್ಥಳಾಂತರಕ್ಕೆ ಪಂಜಾಬ್ ಸರ್ಕಾರದ ಕ್ರಮ 
ದೇಶ

ರಾಜನಾಥ್ ಸಿಂಗ್ ಸೂಚನೆ ಬೆನ್ನಲ್ಲೇ: ಗಡಿ ಗ್ರಾಮಗಳ ಸ್ಥಳಾಂತರಕ್ಕೆ ಪಂಜಾಬ್ ಸರ್ಕಾರದ ಕ್ರಮ

ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಗಡಿ ವ್ಯಾಪ್ತಿಯ ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಂದ ಸೂಚನೆ ಸಿಕ್ಕ ಬೆನ್ನಲ್ಲೇ ಪಂಜಾಬ್ ಸರ್ಕಾರ ಕಾರ್ಯಪ್ರವೃತ್ತವಾಗಿದೆ.

ಚಂಡೀಗಢ: ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಗಡಿ ವ್ಯಾಪ್ತಿಯ ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಂದ  ಸೂಚನೆ ಸಿಕ್ಕ ಬೆನ್ನಲ್ಲೇ ಪಂಜಾಬ್ ಸರ್ಕಾರ ಕಾರ್ಯಪ್ರವೃತ್ತವಾಗಿದೆ.
 
ಕೇಂದ್ರ ಗೃಹ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಗಡಿ ಪ್ರದೇಶದ ಗ್ರಾಮಗಳ ಸ್ಥಳಾಂತರಕ್ಕೆ ಪಂಜಾಬ್ ಸರ್ಕಾರ ಕ್ರಮ ಕೈಗೊಂಡಿದ್ದು, ಸ್ಥಳೀಯ ಅಧಿಕಾರಿಗಳು ಗ್ರಾಮಸ್ಥರಿಗೆ ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಗಡಿ ಭಾಗದ ಜಿಲ್ಲೆಗಳಾದ ಅಮೃತ್ ಸರ, ಗುರ್ದಾಸ್ ಪುರ, ತರ್ನ್, ಫಿರೋಜ್ ಪುರ, ಫರಿದ್ಕೋಟ್ ನ ಭಾಗಗಳಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಿಸಲಾಗಿದೆ. ಗಡಿ ಪ್ರದೇಶಗಳಲ್ಲಿ ಭದ್ರತೆಯನ್ನು ಒದಗಿಸಲು ಬಿಎಸ್ಎಫ್ ಯೋಧರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT