ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಗಡಿಯಲ್ಲಿನ 10ಕಿ.ಮೀ ವ್ಯಾಪ್ತಿಯ ಜಾಗ ಖಾಲಿ ಮಾಡಿಸಿ: ಗಡಿರಾಜ್ಯ ಸಿಎಂಗಳಿಗೆ ರಾಜ್ ನಾಥ್ ಸಿಂಗ್ ಸೂಚನೆ

ಗಡಿ ನಿಯಂತ್ರಣ ರೇಖೆಯಲ್ಲಿ ಅಡಗಿದ್ದ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ ಬೆನ್ನಲ್ಲೇ ಇಂಡೋ-ಪಾಕ್ ಗಡಿ ಉದ್ವಿಗ್ನಗೊಂಡಿದ್ದು, ಗಡಿ ವ್ಯಾಪ್ತಿಯ ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ ಅಡಗಿದ್ದ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ ಬೆನ್ನಲ್ಲೇ ಇಂಡೋ-ಪಾಕ್ ಗಡಿ ಉದ್ವಿಗ್ನಗೊಂಡಿದ್ದು, ಗಡಿ ವ್ಯಾಪ್ತಿಯ  ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ ಕರೆ ಮಾಡಿದ್ದು,  ಮುಂಜಾಗ್ರತಾ ಕ್ರಮವಾಗಿ ಗಡಿಯಿಂದ ಸುಮಾರು 10 ವ್ಯಾಪ್ತಿಯಲ್ಲಿ ಜನರನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಗಡಿಯುದ್ದಕ್ಕೂ ಕಟ್ಟೆಚ್ಚರವಹಿಸುವಂತೆ ಸೇನಾಧಿಕಾರಿಗಳಿಗೆ  ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳು
ಇದೇ ವೇಳೆ ಉಭಯ ದೇಶಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವಂತೆಯೇ ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿದುಬಂದಿದೆ.  ಪ್ರಮುಖವಾಗಿ ಪಂಜಾಬ್ ಭಾಗದ ಗಡಿಗಳಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT