ಎಂಎನ್ಎಸ್ ಮುಖ್ಯಸ್ಥ ಅಮೇಯ್ ಖೊಪ್ಕರ್ 
ದೇಶ

ಭಾರತದಲ್ಲಿ ಪಾಕ್ ಕಲಾವಿದರು ಕಾಣಿಸಿಕೊಂಡರೆ ದೊಣ್ಣೆಪೆಟ್ಟು: ಮತ್ತೆ ಎಂಎನ್ಎಸ್ ಬೆದರಿಕೆ

ಕೆಲ ದಿನಗಳ ಹಿಂದಷ್ಟೇ ಭಾರತ ತೊರೆಯುವಂತೆ ಪಾಕಿಸ್ತಾನ ಕಲಾವಿದರಿಗೆ ಗಡುವು ನೀಡಿ ಬೆದರಿಕೆ ಹಾಕಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯು ಮತ್ತೆ ಶುಕ್ರವಾರ ಪಾಕಿಸ್ತಾನ ಕಲಾವಿದರಿಗೆ...

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಭಾರತ ತೊರೆಯುವಂತೆ ಪಾಕಿಸ್ತಾನ ಕಲಾವಿದರಿಗೆ ಗಡುವು ನೀಡಿ ಬೆದರಿಕೆ ಹಾಕಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯು ಮತ್ತೆ ಶುಕ್ರವಾರ ಪಾಕಿಸ್ತಾನ ಕಲಾವಿದರಿಗೆ ಬೆದರಿಕೆ ಹಾಕಿದೆ.

ಭಾರತ ತೊರೆಯುವಂತೆ ಪಾಕಿಸ್ತಾನ ಕಲಾವಿದರಿಗೆ ನೀಡಲಾಗಿದ್ದ ಗಡುವು ಮುಗಿದು ಸಾಕಷ್ಟು ದಿನಗಳು ಕಳೆದಿವೆ. ಈಗಲೂ ಪಾಕಿಸ್ತಾನ ಕಲಾವಿದರು ಭಾರತದಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದ್ದೇ ಆದರೆ, ಕಣ್ಣಿಗೆ ಬಿದ್ದ ಕಲಾವಿದರಿಗೆ ದೊಣ್ಣೆಪೆಟ್ಟು ನೀಡಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಎಂಎನ್ಎಸ್ ಮುಖ್ಯಸ್ಥ ಅಮೇಯ್ ಖೊಪ್ಕರ್ ಅವರು, ಪಾಕಿಸ್ತಾನದೊಂದಿಗೆ ಕೈ ಮಿಲಾಯಿಸಲು ಇದು ಸಕಾಲವಲ್ಲ. ಪಾಕಿಸ್ತಾನ ಕಲಾವಿದರು ಕೆಲಸ ವೀಸಾದಿಂದ ಭಾರತಕ್ಕೆ ಬರುತ್ತಿಲ್ಲ. ಇದೀಗ ಅವರು ಪ್ರವಾಸಿಗರ ವೀಸಾ ಬಳಸಿಕೊಂಡು ಭಾರತಕ್ಕೆ ಬರುತ್ತಿದ್ದಾರೆ. ಇಂತಹ ಕಲಾವಿದರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಕಲಾವಿದರು ಭಾರತ ತೊರೆಯುವಂತೆ ಈ ಹಿಂದೆ ಗಡುವು ನೀಡಲಾಗಿತ್ತು. ಗಡುವು ಮುಗಿದು ಸಾಕಷ್ಟು ಸಮಯ ಕಳೆದಿದೆ. ಈಗಲೂ ಪಾಕಿಸ್ತಾನ ಕಲಾವಿದರೂ ಭಾರತದಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದರೆ ದೊಣ್ಣೆ ಪೆಟ್ಟು ನೀಡಿ ಭಾರತ ತೊರೆಯುವಂತೆ ಮಾಡಲಾಗುತ್ತದೆ. ಜೊತೆಗೆ ಅವರಿಗೆ ಅವಕಾಶ ನೀಡಿ ಕೆಲಸ ಮಾಡಿಸಿಕೊಳ್ಳುತ್ತಿರುವ ನಿರ್ದೇಶಕರು ಹಾಗೂ ನಿರ್ಮಾಪಕರಿಗೂ ಪೆಟ್ಟು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT