ಎಂಎನ್ಎಸ್ ಮುಖ್ಯಸ್ಥ ಅಮೇಯ್ ಖೊಪ್ಕರ್ 
ದೇಶ

ಭಾರತದಲ್ಲಿ ಪಾಕ್ ಕಲಾವಿದರು ಕಾಣಿಸಿಕೊಂಡರೆ ದೊಣ್ಣೆಪೆಟ್ಟು: ಮತ್ತೆ ಎಂಎನ್ಎಸ್ ಬೆದರಿಕೆ

ಕೆಲ ದಿನಗಳ ಹಿಂದಷ್ಟೇ ಭಾರತ ತೊರೆಯುವಂತೆ ಪಾಕಿಸ್ತಾನ ಕಲಾವಿದರಿಗೆ ಗಡುವು ನೀಡಿ ಬೆದರಿಕೆ ಹಾಕಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯು ಮತ್ತೆ ಶುಕ್ರವಾರ ಪಾಕಿಸ್ತಾನ ಕಲಾವಿದರಿಗೆ...

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಭಾರತ ತೊರೆಯುವಂತೆ ಪಾಕಿಸ್ತಾನ ಕಲಾವಿದರಿಗೆ ಗಡುವು ನೀಡಿ ಬೆದರಿಕೆ ಹಾಕಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯು ಮತ್ತೆ ಶುಕ್ರವಾರ ಪಾಕಿಸ್ತಾನ ಕಲಾವಿದರಿಗೆ ಬೆದರಿಕೆ ಹಾಕಿದೆ.

ಭಾರತ ತೊರೆಯುವಂತೆ ಪಾಕಿಸ್ತಾನ ಕಲಾವಿದರಿಗೆ ನೀಡಲಾಗಿದ್ದ ಗಡುವು ಮುಗಿದು ಸಾಕಷ್ಟು ದಿನಗಳು ಕಳೆದಿವೆ. ಈಗಲೂ ಪಾಕಿಸ್ತಾನ ಕಲಾವಿದರು ಭಾರತದಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದ್ದೇ ಆದರೆ, ಕಣ್ಣಿಗೆ ಬಿದ್ದ ಕಲಾವಿದರಿಗೆ ದೊಣ್ಣೆಪೆಟ್ಟು ನೀಡಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಎಂಎನ್ಎಸ್ ಮುಖ್ಯಸ್ಥ ಅಮೇಯ್ ಖೊಪ್ಕರ್ ಅವರು, ಪಾಕಿಸ್ತಾನದೊಂದಿಗೆ ಕೈ ಮಿಲಾಯಿಸಲು ಇದು ಸಕಾಲವಲ್ಲ. ಪಾಕಿಸ್ತಾನ ಕಲಾವಿದರು ಕೆಲಸ ವೀಸಾದಿಂದ ಭಾರತಕ್ಕೆ ಬರುತ್ತಿಲ್ಲ. ಇದೀಗ ಅವರು ಪ್ರವಾಸಿಗರ ವೀಸಾ ಬಳಸಿಕೊಂಡು ಭಾರತಕ್ಕೆ ಬರುತ್ತಿದ್ದಾರೆ. ಇಂತಹ ಕಲಾವಿದರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಕಲಾವಿದರು ಭಾರತ ತೊರೆಯುವಂತೆ ಈ ಹಿಂದೆ ಗಡುವು ನೀಡಲಾಗಿತ್ತು. ಗಡುವು ಮುಗಿದು ಸಾಕಷ್ಟು ಸಮಯ ಕಳೆದಿದೆ. ಈಗಲೂ ಪಾಕಿಸ್ತಾನ ಕಲಾವಿದರೂ ಭಾರತದಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದರೆ ದೊಣ್ಣೆ ಪೆಟ್ಟು ನೀಡಿ ಭಾರತ ತೊರೆಯುವಂತೆ ಮಾಡಲಾಗುತ್ತದೆ. ಜೊತೆಗೆ ಅವರಿಗೆ ಅವಕಾಶ ನೀಡಿ ಕೆಲಸ ಮಾಡಿಸಿಕೊಳ್ಳುತ್ತಿರುವ ನಿರ್ದೇಶಕರು ಹಾಗೂ ನಿರ್ಮಾಪಕರಿಗೂ ಪೆಟ್ಟು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT