ದೇಶ

ಭಾರತೀಯ ಸೇನೆ ಹೊಡೆತದ ನಂತರವೂ ಮುಂದುವರೆದ ಪಾಕ್ ಮೊಂಡಾಟ: ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘನೆ

Srinivas Rao BV

ಜಮ್ಮು: ಉರಿಯಲ್ಲಿ ಉಗ್ರ ದಾಳಿ ನಡೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸೀಮಿತ ದಾಳಿ ಮೂಲಕ ತಿರುಗೇಟು ನೀಡಿದ್ದರೂ, ಪಾಕಿಸ್ತಾನ ತನ್ನ ಮೊಂಡುತನವನ್ನು ಬಿಡದೇ, ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಅಖ್ನೂರ್ ಸೆಕ್ಟರ್ ನಲ್ಲಿ ಸೆ.30 ರಂದು ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆಯಾಗಿದ್ದು, ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸಿದೆ ಎಂದು ಬಿಎಸ್ ಎಫ್ ನ ಯೋಧರು ಮಾಹಿತಿ ನೀಡಿದ್ದಾರೆ. ರಾತ್ರಿ 12:30 ರಿಂದ 1:30 ರ ವರೆಗೆ ಪಾಕ್ ಸೇನೆ ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ದಾಳಿ ನಡೆದಿದ್ದು ಪಾಕ್ ಪ್ರಚೋದನೆಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ ಎಂದು ತಿಳಿದುಬಂದಿದೆ.

SCROLL FOR NEXT