ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ಶಿವಸೇನೆ ವ್ಯಂಗ್ಯಚಿತ್ರ ವಿವಾದ: ಬೇಷರತ್ ಕ್ಷಮೆಯಾಚಿಸಿದ ಉದ್ಧವ್ ಠಾಕ್ರೆ

ವಿವಾದಕ್ಕೀಡಾಗಿದ್ದ ಸಾಮ್ನಾ ಪತ್ರಿಕೆಯ ವ್ಯಂಗ್ಯಚಿತ್ರ ಕುರಿತಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಶನಿವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ...

ನವದೆಹಲಿ: ವಿವಾದಕ್ಕೀಡಾಗಿದ್ದ ಸಾಮ್ನಾ ಪತ್ರಿಕೆಯ ವ್ಯಂಗ್ಯಚಿತ್ರ ಕುರಿತಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಶನಿವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ.

ವಿವಾದಿತ ವ್ಯಂಗ್ಯಚಿತ್ರ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಉದ್ದೇಶಪೂರ್ವಕವಾಗಿ ಯಾವುದೇ ಕೆಲಸವನ್ನು ನಾವು ಮಾಡಿಲ್ಲ. ವ್ಯಂಗ್ಯಚಿತ್ರದ ಮೂಲಕ ಜನರ ಮನಸ್ಸನ್ನು ನೋಯಿಸಬೇಕೆಂಬ ಉದ್ದೇಶ ನಮ್ಮದಾಗಿರಲಿಲ್ಲ. ತಿಳಿಯದೇ ತಪ್ಪಾಗಿದೆ. ಹೀಗಾಗಿ ಮಹಾರಾಷ್ಟ್ರ ಜನತೆಯ ಬಳಿ ಕ್ಷಮೆಯಾಚಿಸುತ್ತಿದ್ದೇನೆಂದು ಹೇಳಿದ್ದಾರೆ.

ವ್ಯಂಗ್ಯಚಿತ್ರ ಕುರಿತಂತೆ ವಿರೋಧ ವ್ಯಕ್ತವಾದ ಬಳಿಕ ವಿವಾದಗಳನ್ನು ಹುಟ್ಟುಹಾಕಲು ಸಾಕಷ್ಟು ಜನರು ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೆ, ಮಹಾರಾಷ್ಟ್ರ ಜನತೆ ಇದಕ್ಕೆ ಆಸ್ಪದ ನೀಡದಿರುವುದಕ್ಕೆ ಹಾಗೂ ಪ್ರತಿಕ್ರಿಯೆಗಳನ್ನು ನೀಡದಿರುವುದಕ್ಕೆ ಸಂತೋಷವಾಗಿದೆ ಎಂದಿದ್ದಾರೆ.

ಇದೇ ವೇಳೆ ಕ್ಷಮೆಯಾಚಿಸುವುದಕ್ಕೆ ಹಾಗೂ ಪ್ರತಿಕ್ರಿಯೆ ನೀಡುವುದಕ್ಕೆ ಇಷ್ಟು ತಡವೇಕೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ವಿಚಾರವನ್ನು ದೊಡ್ಡದು ಮಾಡುವುದು ನಮಗಿಷ್ಟವಿರಲಿಲ್ಲ. ಕೆಲ ಸಂಚುಕೋರರಿಂದಾಗಿ ವಿಚಾರ ದೊಡ್ಡದಾಗಿದೆ. ಸಂಚಿನ ಹಿಂದೆ ಯಾರಿದ್ದಾರೆಂಬುದನ್ನು ಶೀಘ್ರದಲ್ಲಿಯೇ ಬಹಿರಂಗಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವುದರ ಕುರಿತಂತೆ ಮಾತನಾಡಿರುವ ಅವರು, ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ವಿಶೇಷ ಅಧಿವೇಶವನ್ನು ನಡೆಸುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದರು. ಶೀಘ್ರದಲ್ಲಿಯೇ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಮೀಸಲಾತಿಗೆ ಆಗ್ರಹಿಸಿ ಮರಾಠಾ ಸಮುದಾಯ ನಡೆಸುತ್ತಿರುವ ಮೌನ ಪ್ರತಿಭಟನೆ ಸಂಬಂಧಿಸಿದಂತೆ ಸಾಮ್ನಾ ವ್ಯಂಗ್ಯಚಿತ್ರಕಾರ ಶ್ರೀನಿವಾಸ್ ಪ್ರಭುದೇಸಾಯಿಯವರು, ಮೌನ ಮೆರವಣಿಗೆಯನ್ನು ಟೀಕಿಸುವ ವ್ಯಂಗ್ಯಚಿತ್ರವೊಂದನ್ನು ರಚಿಸಿದ್ದರು. ಈ ವ್ಯಂಗ್ಯಚಿತ್ರ ಸಾಮ್ನಾ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿತ್ತು.

ಶ್ರೀನಿವಾಸ್ ಪ್ರಭುದೇಸಾಯಿಯವರ ಈ ವ್ಯಂಗ್ಯಚಿತ್ರಕ್ಕೆ ಮರಾಠಾ ಸಮುದಾಯದ ಜನರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಕ್ಷಮೆಯಾಚಿಸುವಂತೆ ಕೋರಿ ಪ್ರತಿಭಟನೆಗಿಳಿದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT