ಶಿವಸೇನೆ ನಾಯಕಿ ಮನಿಷಾ ಕಯಾಂಡೆ 
ದೇಶ

ಪಾಕ್ ಕಲಾವಿದರ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ಸಲ್ಮಾನ್ ಪಾಕಿಸ್ತಾನಕ್ಕೆ ಹೋಗಲಿ: ಶಿವಸೇನೆ

ಪಾಕಿಸ್ತಾನ ಕಲಾವಿದರ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ನಟ ಸಲ್ಮಾನ್ ಖಾನ್ ಅವರು ಪಾಕಿಸ್ತಾನಕ್ಕೇ ವಲಸೆ ಹೋಗಲಿ ಎಂದು ಶಿವಸೇನೆ ಶನಿವಾರ ಹೇಳಿದೆ...

ನವದೆಹಲಿ: ಪಾಕಿಸ್ತಾನ ಕಲಾವಿದರ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ನಟ ಸಲ್ಮಾನ್ ಖಾನ್ ಅವರು ಪಾಕಿಸ್ತಾನಕ್ಕೇ ವಲಸೆ ಹೋಗಲಿ ಎಂದು ಶಿವಸೇನೆ ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕಿ ಮನಿಷಾ ಕಯಾಂಡೆ ಅವರು, ಪಾಕಿಸ್ತಾನ ಕಲಾವಿದರ ಬೆನ್ನಿಗೆ ನಿಂತು ಬೆಂಬಲ ಸೂಚಿಸುತ್ತಿರುವ ಸಲ್ಮಾನ್ ಖಾನ್ ಅವರಿಗೆ ಸರಿಯಾದ ಪಾಠ ಹೇಳಬೇಕಿದೆ. ಪಾಕಿಸ್ತಾನ ಕಲಾವಿದರ ಮೇಲೆ ಸಲ್ಮಾನ್ ಅವರಿಗೆ ಅಷ್ಟೊಂದು ಪ್ರೀತಿ ಇದೆ ಎಂದಾದರೆ, ಅವರು ಪಾಕಿಸ್ತಾನಕ್ಕೆ ವಲಸೆ ಹೋಗಲಿ ಎಂದು ಹೇಳಿದ್ದಾರೆ.

ಉರಿ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಡುವಂತೆ ಮಾಡಿದ್ದು, ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಕಲಾವಿದರು ಕೂಡಲೇ ಭಾರತವನ್ನು ತೊರೆಯುವಂತೆ (ಎಂಎನ್ ಎಸ್) ಮಹಾರಾಷ್ಟ್ರ ನವನಿರ್ಮಾಣ ಸೇನೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ ಕೂಡ ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ನಟ ಸಲ್ಮಾನ್ ಖಾನ್ ಅವರು, ಪಾಕಿಸ್ತಾನ ಕಲಾವಿದರೇನು ಭಯೋತ್ಪದಾರಕರಲ್ಲ. ಕಲೆಗೂ ಭಯೋತ್ಪಾದನೆಗೂ ಸಾಕಷ್ಟು ವ್ಯತ್ಯಾಸಗಳಿವೆ. ಕಲೆ ಹಾಗೂ ಭಯೋತ್ಪಾದನೆಯನ್ನು ಸಮಾನ ರೀತಿಯಲ್ಲಿ ನೋಡಬಾರದು. ಪಾಕಿಸ್ತಾನ ಕಲಾವಿದರನ್ನು ಭಯೋತ್ಪಾದನಕರಂತೆ ನೋಡುವುದನ್ನು ನಿಲ್ಲಿಸಬೇಕೆಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT