ಮತ್ತೆ ಸೇನಾ ದಾಳಿ ಭೀತಿ: ಪಿಒಕೆ ಯಿಂದ ಕಾಲ್ಕೀಳಲು ಉಗ್ರರಿಗೆ ಪಾಕ್ ಸೇನೆಯ ಸಹಾಯ ! 
ದೇಶ

ಮತ್ತೆ ಸೇನಾ ದಾಳಿ ಭೀತಿ: ಪಿಒಕೆ ಯಿಂದ ಕಾಲ್ಕೀಳಲು ಉಗ್ರರಿಗೆ ಪಾಕ್ ಸೇನೆಯ ಸಹಾಯ !

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿದ್ದ ಉಗ್ರ ಕ್ಯಾಂಪ್ ಗಳನ್ನು ಮುಜಾಫರಾಬಾದ್ ನಿಂದ ಆಚೆಗೆ ಸ್ಥಳಾಂತರಿಸಲು ಸಹಾಯ ಮಾಡುತ್ತಿದೆ ಎಂಬ ವರದಿಗಳು ಪ್ರಕಟವಾಗಿದೆ.

ನವದೆಹಲಿ: ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಕ್ಕೆ ನುಗ್ಗಿ ಸೀಮಿತ ದಾಳಿ ನಡೆಸಿ ಭಯೋತ್ಪಾದಕ ಕ್ಯಾಂಪ್ ಗಳನ್ನು ಧ್ವಂಸ ಮಾಡಿದ ನಂತರ ಪಾಕಿಸ್ತಾನಕ್ಕೆ ಅಕ್ಷರಸಹ ನಡುಕ ಪ್ರಾರಂಭವಾಗಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿದ್ದ ಉಗ್ರ ಕ್ಯಾಂಪ್ ಗಳನ್ನು ಮುಜಾಫರಾಬಾದ್ ನಿಂದ ಆಚೆಗೆ ಸ್ಥಳಾಂತರಿಸಲು ಸಹಾಯ ಮಾಡುತ್ತಿದೆ ಎಂಬ ವರದಿಗಳು ಪ್ರಕಟವಾಗಿದೆ.

ಎಕನಾಮಿಕ್ ಟೈಮ್ಸ್ ನ ವರದಿಯೊಂದು ಗುಪ್ತಚರ ಇಲಾಖೆಯ ಮಾಹಿತಿಯನ್ನು ಉಲ್ಲೇಖಿಸಿದ್ದು, ಪಾಕಿಸ್ತಾನ ತಾನು ಆಕ್ರಮಿಸಿರುವ ಪ್ರದೇಶದಲ್ಲಿರುವ ಭಯೋತ್ಪಾದಕ ಕ್ಯಾಂಪ್ ಗಳನ್ನು ಹಾಗು ಭಯೋತ್ಪಾದಕರ ಜೀವ ರಕ್ಷಿಸಲು ಕ್ರಮ ಕೈಗೊಂಡಿದ್ದು ಭಯೋತ್ಪಾದಕರು ಆಕ್ರಮಿತ ಕಾಶ್ಮೀರ ಪ್ರದೇಶದಿಂದ ಕಾಲ್ಕೀಳಲು ಪಾಕಿಸ್ತಾನ ನೆರವು ನೀಡುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರದಿಂದ ಪಲಾಯನ ಮಾಡಲು ಸಿದ್ಧವಾಗಿರುವ ಭಯೋತ್ಪಾದಕ ಕ್ಯಾಂಪ್ ಗಳಿಗೆ ಪಿಒಕೆ ಯಿಂದ ಆಚೆ ಇರುವ ಮುಜಾಫರಾಬಾದ್ ನಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪಾಕ್ ಆಕ್ರಮಿತ ಪ್ರದೇಶದಲ್ಲಿರುವ ಮುರೀ ರಾವಲ್ಕೋಟ್ ಗೆ ನುಗ್ಗಿ ಸೀಮಿತ ದಾಳಿ ನಡೆಸಿದ್ದ ಭಾರತೀಯ ಯೋಧರು ಭಯೋತ್ಪಾದಕರ 7 ಲಾಂಚಿಗ್ ಪ್ಯಾಡ್( ಭಾರತದೊಳಗೆ ನುಗ್ಗಲು ಸಿದ್ಧತೆ ನಡೆಸಿರುವ ಶಿಬಿರ)ಗಳನ್ನು ನಿರ್ನಾಮ ಮಾಡಿ 38 ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಭಯೋತ್ಪಾದಕರು ಪಿಒಕೆ ಯಲ್ಲಿರುವ ಶಿಬಿರಗಳಿಂದ ಕಾಲ್ಕಿತ್ತಿದ್ದು, ಪಾಕಿಸ್ತಾನದತ್ತ ಪಲಾಯನ ಮಾಡಿದ್ದಾರೆ ಹಾಗು ಇದಕ್ಕೆ ಪಾಕಿಸ್ತಾನ ನೆರವು ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

ಹೈಕೋರ್ಟ್ ನಲ್ಲೂ Umar Khalid ಗೆ ಹಿನ್ನಡೆ: ಅನಾರೋಗ್ಯ ಪೀಡಿತ ತಾಯಿ, ಜಾಮೀನು ಅರ್ಜಿ ವಜಾ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; 70 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಆರೋಪ!

SCROLL FOR NEXT