ನಾರಾ ಲೋಕೇಶ್ 
ದೇಶ

ಆಂಧ್ರ ಸಚಿವ ಸಂಪುಟ ಪುನಾರಚನೆ: ಸಿಎಂ ನಾಯ್ಡು ಪುತ್ರ ಸೇರಿ 10 ಶಾಸಕರಿಗೆ ಮಂತ್ರಿಗಿರಿ

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಏ.2 ರಂದು ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಪುತ್ರ ನಾರಾ ಲೋಕೇಶ್ ಸೇರಿದಂತೆ 10 ಸದಸ್ಯರನ್ನು ಹೊಸದಾಗಿ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಏ.2 ರಂದು ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಪುತ್ರ ನಾರಾ ಲೋಕೇಶ್ ಸೇರಿದಂತೆ 10 ಸದಸ್ಯರನ್ನು ಹೊಸದಾಗಿ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. 
ಆಂದ್ರ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ನೂತನ ಸಚಿವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಟಿಡಿಪಿ ಪ್ರಧಾನ ಕಾರ್ಯದರ್ಶಿಯಾಗಿರುವ ನಾರಾ ಲೋಕೇಶ್ ಅವರನ್ನು ಮಾರ್ಚ್ ನಲ್ಲಿ ವಿಧಾನ ಪರಿಷತ್ ಗೆ ಆಯ್ಕೆ ಮಾಡಲಾಗಿತ್ತು. ಇದಾದ ಒಂದೇ ತಿಂಗಳಲ್ಲಿ ಸಚಿವ ಸ್ಥಾನವನ್ನೂ ನೀಡಲಾಗಿದೆ. ಸಂಪುಟ ಪುನಾರಚನೆಯಲ್ಲಿ 5 ಸಚಿವರನ್ನು ಕೈಬಿಡಲಾಗಿದ್ದು, ಸಚಿವ ಸ್ಥಾನ ಕಳೆದುಕೊಂಡಿದ್ದಕ್ಕೆ ಅಸಮಾಧಾನಗೊಂಡಿರುವ ಟಿಡಿಪಿ ಹಿರಿಯ ನಾಯಕ ಬಿ ಗೋಪಾಲ ಕೃಷ್ಣ ರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸ್ಪೀಕರ್ ಕೊಡೆಲಾ ಶಿವಪ್ರಸಾದ್ ರಾವ್ ಅವರಿಗೆ ರವಾನೆ ಮಾಡಿದ್ದಾರೆ. 
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮದಲ್ಲಿ ಲೋಕೇಶ್ ಅವರ ತಾಯಿ ಭುವನೇಶ್ವರಿ, ಲೋಕೇಶ್ ಅವರ ಪತ್ನಿ ಬ್ರಹ್ಮಿಣಿ, ಸೋದರ ಮಾವ, ನಟ ಎನ್ ಬಾಲಕೃಷ್ಣ  ಹಾಗೂ ಇನ್ನಿತರ ಕುಟುಂಬ ಸದಸ್ಯರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT