ಸಾಂದರ್ಭಿಕ ಚಿತ್ರ 
ದೇಶ

ಸೊಮಾಲಿಯಾ ಕಡಲ್ಗಳ್ಳರಿಂದ 11 ಭಾರತೀಯರ ಅಪಹರಣ

ಸೊಮಾಲಿಯಾದ ಕಡಲ್ಗಳ್ಳರು 11 ಸಿಬ್ಬಂದಿ ಮತ್ತು ಅಪಾರ ಪ್ರಮಾಣದ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಭಾರತದ ಸರಕು ಸಾಗಣೆ...

ನವದೆಹಲಿ: ಸೊಮಾಲಿಯಾದ ಕಡಲ್ಗಳ್ಳರು 11 ಸಿಬ್ಬಂದಿ ಮತ್ತು ಅಪಾರ ಪ್ರಮಾಣದ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದ ಭಾರತದ ಸರಕು ಸಾಗಣೆ ಹಡಗನ್ನು ಅಪಹರಿಸಿದ್ದಾರೆ ಎಂದು ಸೋಮವಾರ ಹಡಗು ನಿರ್ದೇಶನಾಲಯ ತಿಳಿಸಿದೆ.
ನಿನ್ನೆ ದುಬೈನಿಂದ ಯೆಮೆನ್​ನ ಅಲ್ ಮುಕಾಲಾ ಬಂದರಿಗೆ ತೆರಳುತ್ತಿದ್ದ ‘ಅಲ್ ಕೌಶರ್’ ಎಂಬ ಹಡಗನ್ನು ಅಪಹರಿಸಲಾಗಿದ್ದು, ಅಪಹರಣಕ್ಕೆ ಸಂಬಂಧಿಸಿದಂತೆ ಹಡಗಿನ ಕ್ಯಾಪ್ಟನ್ ದುಬೈನಲ್ಲಿರುವ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಹಡಗು ನಿರ್ದೇಶನಾಲಯದ ಮಲಿನ್ ಶಂಕರ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಅಪಹರಣವಾಗಿರುವ ಹಡಗಿನಲ್ಲಿ 11 ಸಿಬ್ಬಂದಿಗಳಿದ್ದು, ಅವರ ಬಿಡುಗಡೆಗೆ ಕಡಲ್ಗಳ್ಳರು ಇದುವರೆಗೂ ಯಾವುದೇ ಬಿಡಿಕೆ ಇಟ್ಟಿಲ್ಲ ಎಂದು ಮಲಿನ್ ಶಂಕರ್ ಅವರು ಹೇಳಿದ್ದಾರೆ.
ಅಪಹರಣವಾಗಿರುವ ಹಡಗಿನಲ್ಲಿದ್ದ ಸಿಬ್ಬಂದಿ ಮುಂಬೈನ ಮಾಂಡವಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಹಡಗನ್ನು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಯತ್ನ ಪ್ರಾರಂಭಿಸಿದೆ. ಜತೆಗೆ ಭಾರತೀಯ ಹಡಗುಗಳು ಅಪಹರಣವಾಗದಂತೆ ತಡೆಯಲು ನೌಕಾಪಡೆ, ಕರಾವಳಿ ರಕ್ಷಣಾ ಪಡೆಗಳು ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT