ಸಂಗ್ರಹ ಚಿತ್ರ 
ದೇಶ

ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಿ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್!

ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ರೈತರ ತೀರ್ಪು ನೀಡಿರುವ ಮದ್ರಾಸ್ ಹೈಕೋರ್ಟ್ ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ರೈತರ ತೀರ್ಪು ನೀಡಿರುವ ಮದ್ರಾಸ್ ಹೈಕೋರ್ಟ್ ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ  ನೀಡಿದೆ.

ಬರ ಪರಿಹಾರಕ್ಕಾಗಿ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದಲೂ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಸಹಕಾರಿ ಬ್ಯಾಂಕ್ ಗಳಲ್ಲಿರುವ  ರೈತರ ಸಾಲವನ್ನು ಮನ್ನಾ ಮಾಡುವಂತೆ ಆದೇಶ ನೀಡಿದೆ. ಈ ಹಿಂದಷ್ಟೇ ತಮಿಳುನಾಡು ಸರ್ಕಾರ 5 ಎಕರೆವರೆಗಿನ ರೈತರ ಕೃಷಿ ಸಾಲವನ್ನು ಮನ್ನಾ ಮಾಡಿತ್ತು.

ಹೈಕೋರ್ಟ್ ತೀರ್ಪಿನ ಹೊರತಾಗಿಯೂ ಅತ್ತ ದೆಹಲಿಯ ಜಂತರ್ ಮಂತರ್ ನಲ್ಲಿ ತಮಿಳುನಾಡು ರೈತರು ತಮ್ಮ ಅರೆ ಬೆತ್ತಲೆ ಪ್ರತಿಭಟನೆಯನ್ನು ಮುಂದುವರೆಸಿದ್ದು, ಕೇಂದ್ರ ಸರ್ಕಾರ ಕೂಡಲೇ 40 ಸಾವಿರ ಕೋಟಿ ಬರ ಪರಿಹಾರ  ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಅಂತೆಯೇ ಕೂಡಲೇ ಕೇಂದ್ರ ಸರ್ಕಾರ ಸ್ಥಗಿತವಾಗಿರುವ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT