ದೇಶ

ಉಜ್ವಲ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ 2 ಕೋಟಿ ಮೀರಿದೆ: ಪ್ರಧಾನಿ ಮೋದಿ

ಬಡತನ ರೇಖೆಗಿಂತ ಕೆಳಗಿರುವವರಿಗೆ ಸಬ್ಸಿಡಿ ಆಧಾರದಲ್ಲಿ ಅಡುಗೆ ಅನಿಲ ಸಂಪರ್ಕ ಒದಗಿಸುವ ಪ್ರಧಾನ...

ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವವರಿಗೆ ಸಬ್ಸಿಡಿ ಆಧಾರದಲ್ಲಿ ಅಡುಗೆ ಅನಿಲ ಸಂಪರ್ಕ ಒದಗಿಸುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಸಂಖ್ಯೆ ವರ್ಷದೊಳಗೆ ದೇಶದಲ್ಲಿ 2 ಕೋಟಿ ಮೀರಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
 ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ 2 ಕೋಟಿಗೂ ಅಧಿಕವಾಗಿದ್ದು ತೀವ್ರ ಸಂತೋಷವನ್ನುಂಟುಮಾಡಿದೆ. ಬಡ ಕುಟುಂಬಗಳ ಹೆಂಗಸರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಉಜ್ವಲ ಯೋಜನೆ ದೃಢ ಬದ್ಧತೆಯನ್ನು ಹೊಂದಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಇನ್ನೊಂದು ಟ್ವೀಟ್ ನಲ್ಲಿ ಅವರು, ಉಜ್ವಲ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಧನ್ಯವಾದ ಹೇಳಿದರು. ಇದರ ಯಶಸ್ಸಿಗೆ ಹಗಲಿರುಳು ಶ್ರಮಿಸಿದವರನ್ನು ಅಭಿನಂದಿಸಿದರು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮಹತ್ವಾಕಾಂಕ್ಷಿ ಸಾಮಾಜಿಕ ಅಭಿವೃದ್ದಿ ಯೋಜನೆಯಾಗಿದ್ದು, ಇದನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ವರ್ಷ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮೇ 1ರಂದು ಆರಂಭಿಸಿತ್ತು. ಸೌದೆಯಿಂದ ಒಲೆಯಲ್ಲಿ ಅಡುಗೆ ಮಾಡುವ ಸಂಕಷ್ಟದಿಂದ ಬಡ ಕುಟುಂಬಗಳ ಹೆಣ್ಣು ಮಕ್ಕಳನ್ನು ಪಾರು ಮಾಡಲು ಅವರಿಗೆ ಸಬ್ಸಿಡಿಯಲ್ಲಿ ಎಲ್ ಪಿಜಿ ಸೌಲಭ್ಯ ನೀಡುವುದಾಗಿದೆ. ಈ ಯೋಜನೆಯಡಿ 5 ಕೋಟಿ ಕುಟುಂಬಗಳಿಗೆ ಸಬ್ಸಿಡಿಸಹಿತ ಎಲ್ ಪಿಜಿ ಸಂಪರ್ಕ ನೀಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರ

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT