ಸೈಯದ್ ಝೈನುಲ್ ಅಬೇದಿನ್ 
ದೇಶ

ಗೋಮಾಂಸ ನಿಷೇಧಕ್ಕೆ ಬೆಂಬಲ: ಅಜ್ಮೇರ್ ದರ್ಗಾದ ಮುಖ್ಯಸ್ಥನ ವಜಾ, ಆತ ಮುಸ್ಲಿಮನೇ ಅಲ್ಲ ಎಂದು ಘೋಷಣೆ

ಗೋಮಾಂಸ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದ ಅಜ್ಮೇರ್ ದರ್ಗಾದ ಧರ್ಮ ಗುರುವನ್ನು ಅವರ ಸಹೋದರ ಪ್ರಸ್ತುತ ಸ್ಥಾನದಿಂದ ವಜಾಗೊಳಿಸಿ,...

ಅಜ್ಮೇರ್: ಗೋಮಾಂಸ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದ ಅಜ್ಮೇರ್ ದರ್ಗಾದ ಧರ್ಮ ಗುರುವನ್ನು ಅವರ ಸಹೋದರ ಪ್ರಸ್ತುತ ಸ್ಥಾನದಿಂದ ವಜಾಗೊಳಿಸಿ, ಆತ ಮುಸ್ಲಿಂ ಅಲ್ಲ ಎಂದು ಬುಧವಾರ ಘೋಷಿಸಿದ್ದಾರೆ.
ದೇಶದಲ್ಲಿ ಕೋಮುಸೌಹಾರ್ದತೆ ಕಾಪಾಡಲು ಜಾನುವಾರುಗಳನ್ನು ವಧೆ ಮಾಡುವ ಎಲ್ಲ ಕಸಾಯಿಖಾನೆಗಳನ್ನು ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು ಎಂದು ನರೇಂದ್ರ ಮೋದಿ ಸರ್ಕಾರವನ್ನು ಒತ್ತಾಯಿಸಿದ್ದ ಅಜ್ಮೇರ್ ದರ್ಗಾದ ಧರ್ಮ ಗುರು ಸೈಯದ್ ಝೈನುಲ್ ಅಬೇದಿನ್ ಅವರನ್ನು ಅವರ ಸಹೋದರ ಸೈಯದ್ ಅಲ್ಲಾದೀನ್ ಆಲಿಮಿ ಅವರು ದರ್ಗಾ ಮುಖ್ಯಸ್ಥನ ಸ್ಥಾನದಿಂದ ವಜಾಗೊಳಿಸಿದ್ದು, ತಾನೇ ನೂತನ ಧರ್ಮ ಗುರು ಎಂದು ಘೋಷಿಸಿಕೊಂಡಿದ್ದಾರೆ. ಅಲ್ಲದೆ ತನ್ನ ಈ ನಿರ್ಧಾರವನ್ನು ಕುಟುಂಬ ಬೆಂಬಲಿಸಿರುವುದಾಗಿ ಹೇಳಿದ್ದಾರೆ.
ಗೋಮಾಂಸ ಮಾರಾಟ ಹಾಗೂ ಗೋಹತ್ಯೆಯನ್ನು ನಿಷೇಧಿಸಬೇಕೆಂಬ ಅಬೇದಿನ್ ಹೇಳಿಕೆಯು ಧರ್ಮ ನಿಂದನೆಯಾಗಿದ್ದು, ಈ ಕಾರಣಕ್ಕಾಗಿ ಆತ ಮುಸ್ಲಿಮನೇ ಅಲ್ಲ ಎಂದು ಸೈಯದ್ ಅಲ್ಲಾದೀನ್ ಆಲಿಮಿ ಹೇಳಿದ್ದಾನೆ. 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬೇದಿನ್ ಅವರು, ಆಲಿಮಿ ಕ್ರಮಕ್ಕೆ ಕಾನೂನು ಮಾನ್ಯತೆ ಇಲ್ಲ. ಏಕೆಂದರೆ ಇದು 1955ರ ದರ್ಗಾ ಖ್ವಾಜಾ ಸಾಹೇಬ್ ಕಾಯಿದೆಗೆ ಒಳಪಟ್ಟಿರುತ್ತದೆ ಎಂದು ಹೇಳಿದ್ದಾರೆ. ಅಂತೆಯೇ ಈ ವಿಷಯದಲ್ಲಿ ತಾನು ಕಾನೂನು ಅಭಿಪ್ರಾಯ ಪಡೆಯುವುದಾಗಿ ಹೇಳಿದ್ದಾರೆ. 
ಅಜ್ಮೇರ್ನ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾ ಅತ್ಯಂತ ಪ್ರಸಿದ್ಧ ದರ್ಗಾ ಆಗಿದ್ದು ಇಲ್ಲಿಗೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT