ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 
ದೇಶ

ಕೇಜ್ರಿವಾಲ್ ವೈಯಕ್ತಿಕ ವಿಚಾರಕ್ಕಾಗಿ ಹೋರಾಟ ಮಾಡುತ್ತಿಲ್ಲ; ಮನೀಶ್ ಸಿಸೋಡಿಯಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ವಿರೋಧ ಪಕ್ಷಗಳ ಆರೋಪಗಳನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿರಸ್ಕರಿಸಿದ್ದಾರೆ...

ನವದೆಹಲಿ; ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ವಿರೋಧ ಪಕ್ಷಗಳ ಆರೋಪಗಳನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿರಸ್ಕರಿಸಿದ್ದಾರೆ. 
ಜೇಟ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕೇಜ್ರಿವಾಲ್ ವಿರುದ್ಧ ಎದ್ದಿರುವ ರೂ.3.42 ಕೋಟಿ ಕಾನೂನು ಶುಲ್ಕ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಕೇಜ್ರಿವಾಲ್ ಅವರು ತಮ್ಮ ವೈಯಕ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ಮಾಡುತ್ತಿಲ್ಲ. ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿ ಮೊಕದ್ದಮೆಯನ್ನು ಎದುರಿಸುತ್ತಿದ್ದಾರೆಂದು ಹೇಳಿದ್ದಾರೆ. 
ಡಿಡಿಸಿಎಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದರೆ, ಅದು ದೇಶದ ಕ್ರಿಕೆಟ್ ಸಂಪ್ರದಾಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ದೆಹಲಿ ಸರ್ಕಾರ ಸಮಿತಿಯನ್ನು ರಚಿಸಿ ತನಿಖೆಗೆ ಆದೇಶಿಸಿತ್ತು. ಇದು ಕೇಜ್ರಿವಾಲ್ ಅವರ ವೈಯಕ್ತಿಕ ವಿಚಾರವಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಇವಿಎಂ ಗೋಲ್ ಮಾಲ್ ಪ್ರಕರಣ ಸಂಬಂಧ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಮಾನನಷ್ಟ ಮೊಕದ್ದಮೆ ಪ್ರಕರಣ ಕಳೆದ ಒಂದೂವರೆ ವರ್ಷದಿಂದಲೂ ನಡೆಯುತ್ತಲೇ ಇದೆ. ಆದರೆ, ಬಿಜೆಪಿಯವರು ಇದೀಗ ಪ್ರಕರಣ ಪ್ರಸ್ತಾಪ ಮಾಡುತ್ತಿದ್ದಾರೆ. ಏಕೆಂದರೆ ಇವಿಎಂ ಗೋಲ್ ಮಾಲ್ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT