ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯಯಲ್ಲಿ ರಾಮ ನವಮಿ ಆಚರಣೆ ವೇಳೆ ಕಾಲ್ತುಳಿತ, ಓರ್ವ ಮಹಿಳೆ ಸಾವು

ಅಯೋಧ್ಯಯಲ್ಲಿ ಬುಧವಾರ ನಡೆದ ರಾಮ ನವಮಿ ಮೇಳದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ....

ಲಖನೌ: ಅಯೋಧ್ಯಯಲ್ಲಿ ಬುಧವಾರ ನಡೆದ ರಾಮ ನವಮಿ ಮೇಳದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ರಾಮ ಜನ್ಮಭೂಮಿ ಮಂದಿರ ಸಮೀಪ ಇರುವ ತುಳಸಿ ಉದ್ಯಾನದಲ್ಲಿ ಮೊದಲ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಸಿದ್ಧಾರ್ಥನಗರ ಜಿಲ್ಲೆಯ 65 ವರ್ಷದ ದುಲರಿ ದೇವಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. 
ತುಳಸಿ ಭವನದಲ್ಲಿ ಪೂಜೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಜನರ ತಳ್ಳಾಟದಿಂದ ದುಲರಿ ಕೆಳಗೆ ಬಿದ್ದಿದ್ದು, ಕಾಲ್ತುಳಿತದಿಂದಾಗಿ ತನ್ನ ಪತ್ನಿ ಮೃತಪಟ್ಟಿದ್ದಾರೆ ಎಂದು ದುಲರಿ ಪತಿ ಸಾಧು ರಾಮ್ ಅವರು ಹೇಳಿದ್ದಾರೆ. 
ಈ ಮಧ್ಯೆ ದುಲರಿ ದೇವಿ ಭಾರಿ ಜನಸಂದಣಿ ಮಧ್ಯ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಫೈಜಾಬಾದ್ ಎಸ್ಎಸ್ ಪಿ ಅನಂತ್ ಡಿಯೋ ಅವರು ತಿಳಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಲಖಪತಿ ದೇವಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರಯು ನದಿ ದಡದಲ್ಲಿರುವ ಬಂಧತಿರಾದಲ್ಲಿ ಮತ್ತೊಂದು ಕಾಲ್ತುಳಿತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಗಾಯಾಳುಗಳ ಸಂಖ್ಯೆಯನ್ನು ಸ್ಥಳೀಯ ಆಡಳಿತ ಇನ್ನು ಖಚಿತಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾ

SCROLL FOR NEXT