ಅಪರ್ಣಾ ಯಾದವ್ 
ದೇಶ

ಅಖಿಲೇಶ್ ಯಾದವ್ ಪಕ್ಷವನ್ನು ಮುಲಾಯಂ ಸಿಂಗ್ ಗೆ ಒಪ್ಪಿಸಲಿ: ಅಪರ್ಣಾ ಯಾದವ್

ಸಮಾಜವಾದಿ ಪಕ್ಷದಲ್ಲಿ ಮತ್ತೊಂದು ಸುತ್ತಿನ ಕಲಹ ನಡೆಯುವ ಸೂಚನೆಗಳು ದಟ್ಟವಾಗಿದ್ದು, ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷವನ್ನು ಮುಲಾಯಂ ಸಿಂಗ್ ಯಾದವ್ ಅವರಿಗೆ ಒಪ್ಪಿಸಬೇಕೆಂದು...

ಲಖನೌ: ಸಮಾಜವಾದಿ ಪಕ್ಷದಲ್ಲಿ ಮತ್ತೊಂದು ಸುತ್ತಿನ ಕಲಹ ನಡೆಯುವ ಸೂಚನೆಗಳು ದಟ್ಟವಾಗಿದ್ದು, ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷವನ್ನು ಮುಲಾಯಂ ಸಿಂಗ್ ಯಾದವ್ ಅವರಿಗೆ ಒಪ್ಪಿಸಬೇಕೆಂದು ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಹೇಳಿದ್ದಾರೆ. 
ಪಕ್ಷದಲ್ಲಿ ಉಂಟಾಗಿದ್ದ ಭಿನಾಭಿಪ್ರಾಯ ಬಗೆಹರಿಯುವ ವಿಶ್ವಾಸವಿತ್ತು ಎಂದಿರುವ ಅಪರ್ಣಾ ಯಾದವ್, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಚುನಾವಣೆ ವೇಳೆಯಲ್ಲಿ ಮುಲಾಯಂ ಸಿಂಗ್ ಗೆ ನೀಡಿದ್ದ ಮಾತಿನ ಪ್ರಕಾರ ಈಗ ಪಕ್ಷವನ್ನು ಮುಲಾಯಂ ಸಿಂಗ್ ಯಾದವ್ ಗೆ ಒಪ್ಪಿಸಲಿ ಎಂದು ಸಲಹೆ ನೀಡಿದ್ದಾರೆ. 
ವಿಧಾನಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಮುಲಾಯಂ ಸಿಂಗ್ ಅವರಿಗೆ ಬಿಟ್ಟುಕೊಡುವುದಾಗಿ ಅಖಿಲೇಶ್ ಯಾದವ್ ಜನವರಿ ತಿಂಗಳಲ್ಲಿ ಹೇಳಿದ್ದರು. ನುಡಿದಂತೆ ನಡೆಯುವ ವ್ಯಕ್ತಿ ಎಂದು ಅಖಿಲೇಶ್ ಯಾದವ್ ತಮ್ಮ ಬಗ್ಗೆ ಹೇಳಿಕೊಳ್ಳುತ್ತಾರೆ. ಆದ್ದರಿಂದ ಈಗ ಅವರು ನುಡಿದಂತೆ ನಡೆಯುವ ಸಂದರ್ಭ ಎದುರಾಗಿದೆ. ಸಮಾಜವಾದಿ ಪಕ್ಷವನ್ನು ಮುಲಾಯಂ ಸಿಂಗ್ ಗೆ ನೀಡಬೇಕಿದೆ ಎಂದು ಅಪರ್ಣಾ ಯಾದವ್ ಹೇಳಿದ್ದಾರೆ. 
ನನಗೆ ನನ್ನ ಕುಟುಂಬವೇ ಸರ್ವಸ್ವ. ನೇತಾಜಿ ಅವರ ಮಾತೇ ಅಂತಿಮವಾಗಿದ್ದು, ಮುಲಾಯಂ ಸಿಂಗ್ ಯಾದವ್ ಅವರನ್ನು ನಡೆಸಿಕೊಂಡ ರೀತಿ ಸರಿಯಾಗಿರಲಿಲ್ಲ ಎಂದು ಅಪರ್ಣಾ ಯಾದವ್ ಹೇಳಿದ್ದಾರೆ. ಇದೇ ವೇಳೆ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿರುವ ಅಪರ್ಣಾ ಯಾದವ್, ಯೋಗಿ ಆದಿತ್ಯನಾಥ್ ಸಂತರಾಗಿದ್ದು ಸಮಸ್ತ ಉತ್ತರ ಪ್ರದೇಶವನ್ನು ತಮ್ಮ ಕುಟುಂಬದಂತೆ ಭಾವಿಸಿ ಅಭಿವೃದ್ಧಿಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT