ಅಮಿತ್ ಶಾ 
ದೇಶ

2019 ರಲ್ಲಿ ಉತ್ತಮ ಪ್ರದರ್ಶನಕ್ಕಾಗಿ ವೇದಿಕೆ ಸಿದ್ಧಪಡಿಸಿ: ಬಿಜೆಪಿ ಪಡೆಗೆ ಅಮಿತ್ ಶಾ ಸೂಚನೆ

2019 ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಬಿಜೆಪಿ ಪಡೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದು, ಕಳೆದ ಲೋಕಸಭಾ ಚುನಾವಣೆಯಷ್ಟೇ ಫಲಿತಾಂಶದಿಂದ ತೃಪ್ತರಾಗದಂತೆ ಎಚ್ಚರಿಸಿದ್ದಾರೆ.

ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಬಿಜೆಪಿ ಪಡೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದು, ಕಳೆದ ಲೋಕಸಭಾ ಚುನಾವಣೆಯಷ್ಟೇ ಫಲಿತಾಂಶದಿಂದ ತೃಪ್ತರಾಗದಂತೆ ಎಚ್ಚರಿಸಿದ್ದಾರೆ. 
ಏ.6 ರಂದು ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ನವದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ಪಕ್ಷವನ್ನು ರಾಜ್ಯಗಳಲ್ಲಿ ಹೆಚ್ಚು ಬಲಪಡಿಸುವಂತೆ ಸಂಸದರಿಗೆ ಸೂಚನೆ ನೀಡಿದ್ದಾರೆ. ಪಕ್ಷವನ್ನು ಸಂಘಟಿಸುವುದರೊಂದಿಗೆ ಕಳೆದ 3 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನೂ ಅಮಿತ್ ಶಾ ಸಂಸದರ ಹೆಗಲಿಗೇರಿಸಿದ್ದಾರೆ. 
2019 ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಅಮಿತ್ ಶಾ ಬಿಜೆಪಿ ಸಂಸದರಿಗೆ ಒಂದಷ್ಟು ಯೋಜನೆಗಳನ್ನು ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸಚಿವರಿಗೂ ಸಹ ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಲಾಗಿದ್ದು ಯಾವ್ಯಾವ ಸಚಿವರು ಎಲ್ಲೆಲ್ಲಿಗೆ ಹೋಗಿ ಪ್ರಚಾರ ಮಾಡಬೇಕೆಂಬ ಪಟ್ಟಿಯೂ ಈಗಾಗಲೇ ಸಿದ್ಧಗೊಂಡಿದ್ದು, 2019 ರ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿರುವುದು ಸ್ಪಷ್ಟವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT