ಅಲ್ವಾರ್; ಸರಿಸ್ಕಾ ಹುಲಿ ಅಭಯಾರಣ್ಯದಲ್ಲಿ ಅಗ್ನಿ ಅವಘಡ 
ದೇಶ

ಅಲ್ವಾರ್: ಸರಿಸ್ಕಾ ಹುಲಿ ಅಭಯಾರಣ್ಯದಲ್ಲಿ ಅಗ್ನಿ ಅವಘಡ

ಹುಲಿಗಳ ಅದ್ಭುತ ಸಂರಕ್ಷಣಾ ತಾಣವೆಂದೇ ಹೆಸರುವಾಸಿಯಾಗಿರುವ ರಾಜಸ್ತಾನ ರಾಜ್ಯದ ಅಲ್ವಾರ್ ಜಿಲ್ಲೆಯಲ್ಲಿರುವ ಸರಿಸ್ಕಾ ಹುಲಿ ಅಭಯಾರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ...

ಅಲ್ವಾರ್ (ರಾಜಸ್ತಾನ): ಹುಲಿಗಳ ಅದ್ಭುತ ಸಂರಕ್ಷಣಾ ತಾಣವೆಂದೇ ಹೆಸರುವಾಸಿಯಾಗಿರುವ ರಾಜಸ್ತಾನ ರಾಜ್ಯದ ಅಲ್ವಾರ್ ಜಿಲ್ಲೆಯಲ್ಲಿರುವ ಸರಿಸ್ಕಾ ಹುಲಿ ಅಭಯಾರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ಶುಕ್ರವಾರ ತಿಳಿದುಬಂದಿದೆ. 
ಅಭಯಾರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅರಣ್ಯಾಧಿಕಾರಿಗಳು, ಹುಲಿ ಸಂರಕ್ಷಣಾ ಆಡಳಿತ ಮಂಡಳಿ ಅಧಿಕಾರಿಗಳು ಹಾಗೂ ಜಿಲ್ಲಾ ಆಡಳಿತ ಮಂಡಳಿಯವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 
ಅಭಯಾರಣ್ಯ ಗ್ರಾಮಗಳಿಗೆ ಹತ್ತಿರವೇ ಇದ್ದು ಬೆಂಕಿ ನಂದಿಸಲು ನಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಬೆಂಕಿ ನಂದಿಸಲು ಪೊಲೀಸ್ ಹಾಗೂ ಗೃಹ ರಕ್ಷಣ ದಳ ಕೂಡ ಸಹಾಯ ಮಾಡುತ್ತಿದೆ. ಬೆಂಕಿ ನಂದಿಸಲು ಎಲ್ಲಾ ರೀತಿಯ ಸಾಂಪ್ರದಾಯಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಸ್ಥಳದಲ್ಲಿ ಗಾಳಿ ಕೂಡ ಹೆಚ್ಚಾಗಿದ್ದು, ಬೆಂಕಿ ನಂದಿಸಲು ಅಡ್ಡಿಗಳು ಎದುರಾಗುತ್ತಿದೆ. ಸ್ಥಳದಲ್ಲಿ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿರುವುದರಿಂದ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಸಮಯ ಕಳೆಯುತ್ತಿದ್ದಂತೆ ಬೆಂಕಿಯ ದೌದ್ರ ನರ್ತನ ಹೆಚ್ಚಾಗುತ್ತಲೇ ಇದೆ. ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT