ರವೀಂದ್ರ ಗಾಯಕ್ವಾಡ್ (ಸಂಗ್ರಹ ಚಿತ್ರ) 
ದೇಶ

ಕ್ಷಮೆ ಕೇಳದ ಹೊರತು ವಿಮಾನಯಾನ ಇಲ್ಲ; ಮತ್ತೆ ಸಂಸದ ಗಾಯಕ್ವಾಡ್ ಏರ್ ಇಂಡಿಯಾ ಟಿಕೆಟ್ ರದ್ದು

ಏರ್ ಇಂಡಿಯಾ ಸಿಬ್ಬಂದಿಯನ್ನು ಥಳಿಸಿ ವಿಮಾನಯಾನದಿಂದ ನಿಷೇಧಕ್ಕೆ ಒಳಗಾಗಿರುವ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರು ಕ್ಷಮೆ ಕೇಳದ ಹೊರತು ವಿಮಾನಯಾನಕ್ಕೆ ಅವಕಾಶವಿಲ್ಲ ಎಂದು ಹೇಳಿರುವ ಏರ್ ಇಂಡಿಯಾ ಮತ್ತೆ ಅವರ ಟಿಕೆಟ್ ಅನ್ನು ರದ್ದುಗೊಳಿಸಿದೆ.

ನವದೆಹಲಿ: ಏರ್ ಇಂಡಿಯಾ ಸಿಬ್ಬಂದಿಯನ್ನು ಥಳಿಸಿ ವಿಮಾನಯಾನದಿಂದ ನಿಷೇಧಕ್ಕೆ ಒಳಗಾಗಿರುವ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರು ಕ್ಷಮೆ ಕೇಳದ ಹೊರತು ವಿಮಾನಯಾನಕ್ಕೆ ಅವಕಾಶವಿಲ್ಲ ಎಂದು  ಹೇಳಿರುವ ಏರ್ ಇಂಡಿಯಾ ಮತ್ತೆ ಅವರ ಟಿಕೆಟ್ ಅನ್ನು ರದ್ದುಗೊಳಿಸಿದೆ.

ಮುಂಬೈ ನಿಂದ ದೆಹಲಿಗೆ ತೆರಳಲು ಗಾಯಕ್ವಾಡ್ ಬುಕ್ ಮಾಡಿದ್ದ ಟಿಕೆಟ್ ಗಳನ್ನು ಏರ್ ಇಂಡಿಯಾ ಇಂದು ರದ್ದುಗೊಳಿಸಿದ್ದು, ಘಟನೆಯಿಂದ ಏರ್ ಇಂಡಿಯಾ ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದೆ. ಹೀಗಾಗಿ ಸಿಬ್ಬಂದಿಯನ್ನು ಥಳಿಸಿದ  ಸಂಸದ ರವೀಂದ್ರ ಗಾಯಕ್ವಾಡ್ ಏರ್ ಇಂಡಿಯಾ ಸಂಸ್ಥೆ ಮತ್ತು ಸಿಬ್ಬಂದಿಗಳಿಗೆ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ತಿಳಿಸಿದೆ.

ಕ್ಷಮೆ ಕೇಳದ ಹೊರತು ಗಾಯಕ್ವಾಡ್ ವಿಮಾನ ಪ್ರಯಾಣಕ್ಕೆ ಅನುಮತಿ ಬೇಡ: ಸಿಬ್ಬಂದಿ ಸಂಘಟನೆ ಒತ್ತಾಯ

ಏತನ್ಮಧ್ಯೆ ವಿಮಾನಯಾನ ಸಿಬ್ಬಂದಿಗಳ ಒಕ್ಕೂಟ ಎಐಸಿಸಿಎ ಏರ್ ಇಂಡಿಯಾ ಮುಖ್ಯಸ್ಥರಿಗೆ ಪತ್ರವೊಂದನ್ನು ಬರೆದಿದ್ದು, ಸಿಬ್ಬಂದಿಯನ್ನು ಅಮಾನವೀಯವಾಗಿ ಚಪ್ಪಲಿಯಿಂದ ಥಳಿಸಿದ ಸಂಸದ ರವೀಂದ್ರ ಗಾಯಕ್ವಾಡ್ ವಿಮಾನ  ಪ್ರಯಾಣಕ್ಕೆ ಅನುವು ಮಾಡಿಕೊಡಬಾರದು ಎಂದು ಒತ್ತಾಯಿಸಿದೆ. ಅಂತೆಯೇ ರವೀಂದ್ರ ಗಾಯಕ್ವಾಡ್ ಅವರಿಗೆ ಅನುಮತಿ ನೀಡಿದ್ದೇ ಆದರೆ ಮುಂದೆ ಭವಿಷ್ಯದಲ್ಲೂ ಇಂತಹ ಘಟನೆಗಳು ಮರುಕಳಿಸಬಹುದು, ಹೀಗಾಗಿ ರವೀಂದ್ರ ಗಾಯಕ್ವಾಡ್ ಅವರಂತಹ ಪ್ರಯಾಣಿಕರು ವಿಮಾನದ ಸುರಕ್ಷತೆಗೆ ಧಕ್ಕೆತರಬಲ್ಲರು ಎಂದು ಸಿಬ್ಬಂದಿಗಳು ಆತಂಕ  ವ್ಯಕ್ತಪಡಿಸಿದ್ದಾರೆ. ಗಾಯಕ್ವಾಡ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಬೇಕಿದ್ದು, ಸಿಬ್ಬಂದಿಗಳು ಹಾಗೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕಠಿಣಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆಯನ್ನು ಒತ್ತಾಯಿಸಿದೆ.

ವಿವಾದಗಳ ಬಳಿಕ ಸಂಸದರಿಂದ "ವಿಷಾಧ"
ಇನ್ನು ಏರ್ ಇಂಡಿಯಾ ಸಿಬ್ಬಂದಿಯನ್ನು ಥಳಿಸಿ ವಿಮಾನಯಾನದಿಂದ ನಿಷೇಧಕ್ಕೆ ಒಳಗಾಗಿರುವ ರವೀಂದ್ರ ಗಾಯಕ್ವಾಡ್ ಪ್ರಕರಣ ಸಂಸತ್ ನಲ್ಲೂ ಚರ್ಚೆಯಾಗಿದ್ದು, ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಅಭಿಪ್ರಾಯದ ಬಳಿಕ  ಸಂಸದ ರವೀಂದ್ರ ಗಾಯಕ್ವಾಡ್ ಪ್ರಕರಣ ಸಂಬಂಧ ವಿಷಾಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರಿಗೆ ಪತ್ರವೊಂದನ್ನು ಬರೆದಿರುವ ಗಾಯಕ್ವಾಡ್ ಅವರು, ತಮ್ಮ  ಕಾರ್ಯದಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದ್ದರೆ ತಾವು ವಿಷಾಧ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT