ಯೋಗಿ ಆದಿತ್ಯನಾಥ್ 
ದೇಶ

ಉತ್ತರ ಪ್ರದೇಶ: ಸರ್ಕಾರದ ಯೋಜನೆಗಳ ಹೆಸರು ಬದಲಿಸಲು ಯೋಗಿ ಆದಿತ್ಯನಾಥ್ ಆದೇಶ

ಉತ್ತರ ಪ್ರದೇಶ ಸರ್ಕಾರದ ವಿವಿಧ ಯೋಜನೆಗಳಲ್ಲಿ ಬಳಸುತ್ತಿರುವ ಸಮಾಜವಾದಿ ಪದವನ್ನು ತೆಗೆದು ಮುಖ್ಯಮಂತ್ರಿ ಎಂಬ ಪದ ಬಳಸಬೇಕೆಂದು ಸಿಎಂ ಯೋಗಿ ಆದಿತ್ಯನಾಥ್ ...

ಲಕ್ನೋ: ಉತ್ತರ ಪ್ರದೇಶ ಸರ್ಕಾರದ ವಿವಿಧ ಯೋಜನೆಗಳಲ್ಲಿ ಬಳಸುತ್ತಿರುವ ಸಮಾಜವಾದಿ ಪದವನ್ನು ತೆಗೆದು ಮುಖ್ಯಮಂತ್ರಿ ಎಂಬ ಪದ ಬಳಸಬೇಕೆಂದು ಸಿಎಂ ಯೋಗಿ ಆದಿತ್ಯನಾಥ್ ಅದೇಶಿಸಿದ್ದಾರೆ.
ಸದ್ಯ ಜಾರಿಯಲ್ಲಿರುವ ಎಲ್ಲಾ ಸರ್ಕಾರಿ ಯೋಜನೆಗಳಲ್ಲೂ ಸಮಾಜವಾದಿ ಎಂಬ ಪದ ಬಳಕೆಯಾಗುತ್ತಿದೆ. ಅದನ್ನು ತೆಗೆದು ಹಾಕಿ ಮುಖ್ಯಮಂತ್ರಿ ಎಂದು ಎಲ್ಲಾ ಯೋಜನೆಗಳ ಹೆಸರನ್ನು ಬದಲಿಸಬೇಕೇಂದು ನಿನ್ನೆ ಸಂಜೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಆದೇಶಿಸಿದ್ದಾರೆ. 
ಉತ್ತರ ಪ್ರದೇಶದ ಎಲ್ಲಾ ಯೋಜನೆಗಳಿಗೂ ಸಮಾಜವಾದಿ ಎಂದು ಹೆಸರಿಸಲಾಗಿತ್ತು. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಆ್ಯಂಬುಲೆನ್ಸ್  ಅನ್ನು ಸಮಾಜವಾದಿ ಆ್ಯಂಬುಲೆನ್ಸ್  ಸರ್ವೀಸ್ ಎಂದು ಕರೆಯಲಾಗುತ್ತಿತ್ತು.
ಸಮಾಜವಾದಿ ಪಕ್ಷದ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್ ಅವರ ಆಟೋಗ್ರಾಪ್ ವುಳ್ಳ  60 ಲಕ್ಷ ರೇಷನ್ ಕಾರ್ಡ್ ವಿತರಿಸದಿರಲು ಬಿಜೆಪಿ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ 24 ಗಂಟೆ ಹಾಗೂ ಗ್ರಾಮೀಣ ಭಾಗಗಳಿಗೆ 18 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಇಲಾಖೆಗೆ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. 
ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಬಾರದೆಂದು ಆದೇಶಿಸಿರುವ ಸಿಎಂ ಮುಂದಿನ 100 ದಿನಗಳಲ್ಲಿ, 5ಲಕ್ಷ ಹೊಸ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT