ತರುಣ್ ವಿಜಯ್ 
ದೇಶ

ದಕ್ಷಿಣ ಭಾರತೀಯರ ಕುರಿತ ಹೇಳಿಕೆ: ಕ್ಷಮೆ ಯಾಚಿಸಿದ ತರುಣ್ ವಿಜಯ್

ದಕ್ಷಿಣ ಭಾರತೀಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮಾಜಿ ಸಂಸದ ತರುಣ್ ವಿಜಯ್ ಕ್ಷಮೆ ಯಾಚಿಸಿದ್ದಾರೆ.

ನವದೆಹಲಿ: ದಕ್ಷಿಣ ಭಾರತೀಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮಾಜಿ ಸಂಸದ ತರುಣ್ ವಿಜಯ್ ಕ್ಷಮೆ ಯಾಚಿಸಿದ್ದಾರೆ. 
ಭಾರತದಲ್ಲಿ ವರ್ಣ ಭೇದ ಇಲ್ಲ ಎಂಬುದನ್ನು ಹೇಳುವ ಭರದಲ್ಲಿ ತರುಣ್ ವಿಜಯ್ ದಕ್ಷಿಣ ಭಾರತೀಯರು ಕಪ್ಪು ಬಣ್ಣದವರೆಂದು ಹೇಳಿದ್ದರು. ಒಂದು ವೇಳೆ ಭಾರತದಲ್ಲಿ ವರ್ಣ ಭೇದ ಇದ್ದಿದ್ದರೆ ದಕ್ಷಿಣ ಭಾರತೀಯರೊಂದಿಗೆ ಏಕೆ ಉಳಿದ ಭಾರತೀಯರು ಇರುತ್ತಿದ್ದರು ಎಂದು ತರುಣ್ ವಿಜಯ್ ಹೇಳಿದ್ದರು.
ಭಾರತದಲ್ಲಿ ಆಫ್ರಿಕನ್ನರ ಮೇಲೆ ದಾಳಿ ನಡೆಯುವುದಕ್ಕೂ ವರ್ಣ ಭೇದ ನೀತಿಗೂ ಸಂಬಂಧವಿಲ್ಲ ಎಂಬುದನ್ನು ಸಮರ್ಥಿಸಿಕೊಳ್ಳಲು ಹೋಗಿ ದಕ್ಷಿಣ ಭಾರತೀಯರ ಬಣ್ಣದ ಬಗ್ಗೆ ಇನ್ನೂ ಪ್ರಸಾರವಾಗದ ಟಿವಿ ಕಾರ್ಯಕ್ರಮವೊಂದರಲ್ಲಿ  ತರುಣ್ ವಿಜಯ್ ಮಾತನಾಡಿದ್ದು ವಿವಾದಕ್ಕೆ ತಿರುಗಿತ್ತು. ತಮ್ಮ ಹೇಳಿಕೆಗೆ ತೀವ್ರ ವಿರೋಧ ಎದುರಾಗುತ್ತಿದ್ದಂತೆಯೇ ತರುಣ್ ವಿಜಯ್ ಟ್ವಿಟರ್ ನಲ್ಲಿ ಕ್ಷಮೆ ಯಾಚಿಸಿದ್ದು, ನನ್ನ ಹೇಳಿಕೆಯ ಉದ್ದೇಶವನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವವರಿಗೆ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದ್ದಾರೆ. 
ಬಾಯ್ತಪ್ಪಿಯೂ ದಕ್ಷಿಣ ಭಾರತೀಯರನ್ನು ಕಪ್ಪು ವರ್ಣದವರೆಂದು ಹೇಳಿಲ್ಲ. ಸಂಪೂರ್ಣ ಕಾರ್ಯಕ್ರಮ ವೀಕ್ಷಿಸುವ ತಾಳ್ಮೆ ಇರಲಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ನಾನು ಪ್ರಾಣವನ್ನಾದರೂ ಕೊಡುತ್ತೇನೆ, ಆದರೆ ನನ್ನ ದೇಶದ ಜನತೆ, ನನ್ನ ದೇಶದ ಸಂಸ್ಕೃತಿಯನ್ನು ಗೇಲಿ ಮಾಡಲು ಹೇಗೆ ಸಾಧ್ಯ? ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದನ್ನು ಮುನ್ನ ಯೋಚನೆ ಮಾಡಿ ಎಂದು ತರುಣ್ ವಿಜಯ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Afghanistan-Pakistan War: ಪಾಕ್ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ; ಭಾರತದಂತೆ ಕಠಿಣ ನಿರ್ಧಾರ ತೆಗೆದುಕೊಂಡ ACB

'75 ಗಂಟೆಯಲ್ಲಿ 303 ನಕ್ಸಲರ ಶರಣಾಗತಿ: ಭಯೋತ್ಪಾದನೆ ಮುಕ್ತ ದೀಪಾವಳಿ; ವಿಶ್ವದ ಮುಂದೆ ಮೊದಲ ಬಾರಿ ನನ್ನ ನೋವು ಹೇಳಿಕೊಳ್ತಿದ್ದೀನಿ'

Pakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು, ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್

ಮತ್ತೆ ಸರ್ಕಾರ V/s ಗುತ್ತಿಗೆದಾರರ ಸಮರ: ಬಿಲ್​ ಕ್ಲಿಯರ್​ ಮಾಡಲು 1 ತಿಂಗಳ ಗಡುವು..!

ಬೆಂಗಾವಲು ರಕ್ಷಣೆ ವಾಪಸ್: ನನಗೇನಾದರೂ ಆದರೆ, ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಹೊಣೆ; ಛಲವಾದಿ ನಾರಾಯಣಸ್ವಾಮಿ

SCROLL FOR NEXT