ಅಮರಿಂದರ್ ಸಿಂಗ್ 
ದೇಶ

ಯೋಗಿ ಹಾದಿಯಲ್ಲಿ ಪಂಜಾಬ್ ಸಿಎಂ: ರೈತರ ಸಾಲ ಮನ್ನಾ ಮಾಡಲು ಮುಂದಾದ ಅಮರಿಂದರ್ ಸಿಂಗ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆ ರಾಜ್ಯದ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ, ಇದೀಗ ಪಂಜಾಬ್ ಸಿಎಂ ಕ್ಯಾಪ್ಟನ್ ...

ಚಂಡಿಘಡ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆ ರಾಜ್ಯದ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ, ಇದೀಗ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್‌ ಸಿಂಗ್ ಕೂಡ ತಮ್ಮ ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.
ರೈತರ ಸಾಲ ಮನ್ನಾ ಮಾಡುವ ನಿರ್ಧಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರದ ನೆರವು ನೀಡಲಿ, ನೀಡದಿರಲಿ, ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್ ತಿಳಿಸಿದ್ದಾರೆ. 
ಝಿರಾಕ್ ಪುರದಲ್ಲಿ ಡಿಮಾರ್ಟ್ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು ಸಾಲಮನ್ನಾಕ್ಕಾಗಿ ಕೇಂದ್ರಕ್ಕೆ ಮನವಿ ಮಾಡುತ್ತೇನೆ, ಒಂದು ವೇಳೆ ಕೇಂದ್ರ ಸರ್ಕಾರ ಬೆಂಬಲ ನೀಡದಿದ್ದಲ್ಲಿ ರಾಜ್ಯ ಸರ್ಕಾರವೇ ರೈತರ ಸಾಲಮನ್ನಾ ಮಾಡಲಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆ ಈಡೇರಿಸಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ.  ಡ್ರಗ್‌ ದಂಧೆ ಮಟ್ಟ ಹಾಕಲು ಹಿರಿಯ ಪೊಲೀಸ್ ಅಧಿಕಾರಿ ಹರ್‌ಪ್ರೀತ್ ಸಿಂಗ್ ಸಿಧು ನೇತೃತ್ವದಲ್ಲಿ ತಂಡ ಸಹ ರಚನೆ ಮಾಡಲಾಗಿದೆ ಎಂದು ಸಿಎಂ ಅಮರೀಂದರ್  ತಿಳಿಸಿದ್ದಾರೆ.
ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿರುವ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅವಶ್ಯಕವಾಗಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಆರ್ಥಿಕ ಯೋಜನೆಗಳ ಸಂಬಂಧ ಶ್ವೇತಪತ್ರ ಹೊರಡಿಸುವುದಾಗಿ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT