ರವೀಂದ್ರ ಗಾಯಕ್ವಾಡ್ 
ದೇಶ

ಸಂಸದ ಗಾಯಕ್ವಾಡ್ ಮೇಲಿನ ನಿಷೇಧ ಹಿಂಪಡೆದ ಭಾರತೀಯ ವಿಮಾನಯಾನ ಒಕ್ಕೂಟ

ಏರ್ ಇಂಡಿಯಾ ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ವಿಮಾನಯಾನಕ್ಕೆ ವಿಧಿಸಿದ್ದ...

ನವದೆಹಲಿ: ಏರ್ ಇಂಡಿಯಾ ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ವಿಮಾನಯಾನಕ್ಕೆ ವಿಧಿಸಿದ್ದ ನಿಷೇಧವನ್ನು ಸುಮಾರು ಎರಡು ವಾರಗಳ ನಂತರ ನಾಲ್ಕು ಪ್ರಮುಖ ವಿಮಾಯಾನ ಸಂಸ್ಥೆಗಳನ್ನೊಳಗೊಂಡ ಭಾರತೀಯ ವಿಮಾನಯಾನ ಸಂಸ್ಥೆಗಳ ಒಕ್ಕೂಟ(ಎಫ್ಐಎ) ಶನಿವಾರ ಹಿಂಪಡೆದಿದೆ.
ಏರ್ ಇಂಡಿಯಾ ರವೀಂದ್ರ ಗಾಯಕ್ವಾಡ್ ಮೇಲಿನ ನಿಷೇಧ ತೆರವುಗೊಳಿಸಿದ ನಂತರ ಇದೀಗ ನಿಷೇಧವನ್ನು ಬೆಂಬಲಿಸಿದ್ದ ಜೆಟ್ ಏರ್ ವೇಯ್ಸ್, ಸ್ಪೈಸ್ ಜೆಟ್, ಗೋ ಏರ್ ಹಾಗೂ ಇಂಡಿಗೋ ಸಹ ಇಂದು ಸಂಸದನ ಮೇಲಿನ ನಿಷೇಧವನ್ನು ತೆರವುಗೊಳಿಸಿವೆ. 
ಏರ್ ಇಂಡಿಯಾ ಸಂಸದನ ಮೇಲಿನ ನಿಷೇಧ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳ ಒಕ್ಕೂಟ ಸಹ ನಿಷೇಧ ತೆರವುಗೊಳಿಸಿದೆ ಎಂದು ಎಫ್ಐಎ ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಗಾಯಕ್ವಾಡ್ ಅವರು ವಿಷಾದ ವ್ಯಕ್ತಪಡಿಸಿ ಗುರುವಾರ ವಿಮಾನಯಾನ ಖಾತೆ ಸಚಿವ ಅಶೋಕ್ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಂಸದನ ವಿಮಾಯಾನ ನಿಷೇಧವನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ಏರ್ ಇಂಡಿಯಾಗೆ ಸೂಚಿಸಿತ್ತು. ಬಳಿಕ ಏರ್ ಇಂಡಿಯಾ ಸಂಸದನ ಮೇಲಿನ ನಿಷೇಧ ಹಿಂಪಡೆದಿತ್ತು.
ಮಾರ್ಚ್ 23ರಂದು ಪುಣೆ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಗಾಯಕ್ವಾಡ್ ಅವರು ಏರ್ ಇಂಡಿಯಾ ಸಿಬ್ಬಂದಿಯೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ್ದರು. ಈ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಅಭಿಪ್ರಾಯದ ಬಳಿಕ  ಸಂಸದ ರವೀಂದ್ರ ಗಾಯಕ್ವಾಡ್ ಪ್ರಕರಣ ಸಂಬಂಧ ವಿಷಾದ ವ್ಯಕ್ತಪಡಿಸಿದ್ದರು. ಅಶೋಕ್ ಗಜಪತಿ ರಾಜು ಅವರಿಗೆ ಪತ್ರವೊಂದನ್ನು ಬರೆದಿರುವ ಗಾಯಕ್ವಾಡ್ ಅವರು, ತಮ್ಮ  ಕಾರ್ಯದಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದ್ದರೆ ತಾವು ವಿಷಾಧ ವ್ಯಕ್ತಪಡಿಸುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT