ಸಂಗ್ರಹ ಚಿತ್ರ 
ದೇಶ

ಉಪಚುನಾವಣಾ ಸಮರ: 1 ಲೋಕಸಭೆ, 10 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ

ಶ್ರೀನಗರ ಲೋಕಸಭಾ ಕ್ಷೇತ್ರ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 8 ರಾಜ್ಯಗಳ 10 ಕಡೆ ಉಪ ಚುನಾವಣಾ ಸಮರ ಭಾನುವಾರ ಆರಂಭವಾಗಿದೆ...

ಶ್ರೀನಗರ: ಶ್ರೀನಗರ ಲೋಕಸಭಾ ಕ್ಷೇತ್ರ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 8 ರಾಜ್ಯಗಳ 10 ಕಡೆ ಉಪ ಚುನಾವಣಾ ಸಮರ ಭಾನುವಾರ ಆರಂಭವಾಗಿದೆ. 
ರಾಜ್ಯದ ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರ ಹಾಗೂ ದೆಹಲಿಯ ರಜೌರಿ ಗಾರ್ಡನ್, ಜಾರ್ಖಂಡ್ ನ ಲಿತಿಪರ್, ರಾಜಸ್ತಾನ ಧೋಲ್ಪುರ್, ಪಶ್ಚಿಮ ಬಂಗಾಳದ ಕಂತಿ ದಕ್ಷಿಣ್, ಮಧ್ಯಪ್ರದೇಶದ ಅತೆರ್ ಮತ್ತು ಬಂಧವ್ ಘರ್, ಹಿಮಾಚಲ ಪ್ರದೇಶದ ಬೋರಂಜ್ ಮತ್ತು ಅಸ್ಸಾಂ ರಾಜ್ಯದ ಧೇಮೈ ವಿಧಾನಸಭಾ ಕೇತ್ರಗಳಲ್ಲಿ ಬಿಗಿ ಭದ್ರತೆಯೊಂದಿಗೆ ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಬಿರುಸಿನ ಮತದಾನ ಪ್ರಕ್ರಿಯೆ ಆರಂಭವಾಗಿದೆ. 
ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರಕ್ಕೂ ಇಂದೇ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಶ್ರೀನಗರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಏ.15ರಂದು ನಡೆಯಲಿದ್ದು, 10 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಏ.13 ರಂದು ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT