ಶ್ರೀರಾಮನ ವಿರುದ್ಧ ಫೇಸ್ಬುಕ್'ನಲ್ಲಿ ಪೋಸ್ಟ್: ಒಡಿಶಾದಲ್ಲಿ ತಾರಕ್ಕೇರಿದ ಪ್ರತಿಭಟನೆ, ಸೆಕ್ಷನ್ 144 ಜಾರಿ 
ದೇಶ

ಶ್ರೀರಾಮನ ವಿರುದ್ಧ ಫೇಸ್ಬುಕ್'ನಲ್ಲಿ ಪೋಸ್ಟ್: ಒಡಿಶಾದಲ್ಲಿ ತಾರಕ್ಕೇರಿದ ಪ್ರತಿಭಟನೆ, ಸೆಕ್ಷನ್ 144 ಜಾರಿ

ಸಾಮಾಜಿಕ ಜಾಲತಾಣ ಫೇಸ್'ಬುಕ್'ನಲ್ಲಿ ಶ್ರೀರಾಮನ ವಿರುದ್ಧ ಪೋಸ್ಟ್ ಹಾಕಿದ ಪರಿಣಾಮ ಒಡಿಶಾದ ಭದ್ರತ್ ಜಿಲ್ಲೆಯಲ್ಲಿ ಪ್ರತಿಭಟನೆ ತಾರಕ್ಕೇರಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಹಲವೆಡೆ ಅಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆಂದು...

ಭುವನೇಶ್ವರ: ಸಾಮಾಜಿಕ ಜಾಲತಾಣ ಫೇಸ್'ಬುಕ್'ನಲ್ಲಿ ಶ್ರೀರಾಮನ ವಿರುದ್ಧ ಪೋಸ್ಟ್ ಹಾಕಿದ ಪರಿಣಾಮ ಒಡಿಶಾದ ಭದ್ರತ್ ಜಿಲ್ಲೆಯಲ್ಲಿ ಪ್ರತಿಭಟನೆ ತಾರಕ್ಕೇರಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಹಲವೆಡೆ ಅಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. 
ಫೇಸ್ ಬುಕ್ ನಲ್ಲಿ ಮರ್ಯಾದ ಪುರುಷ ಶ್ರೀರಾಮನ ವಿರುದ್ಧ ಪೋಸ್ಟ್ ಗಳು ಕಂಡು ಬಂದ ಹಿನ್ನಲೆಯಲ್ಲಿ ಒಡಿಶಾದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದವು. ಈ ಪ್ರತಿಭಟನೆ ತಾರಕ್ಕೇರಿದ ಹಿನ್ನಲೆಯಲ್ಲಿ ಭದ್ರಕ್, ಧಮ್ನಗರ ಹಾಗೂ ಬಸುದೇವ್ಪುರದಲ್ಲಿ ನಿನ್ನೆ ಸೆಕ್ಷನ್ 144 ಜಾರಿ ಮಾಡಲಾಗಿತ್ತು. ನಿಷೇಧಾಜ್ಞೆ ಇಂದೂ ಕೂಡ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ. 
ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಈಗಾಗಲೇ ಒಡಿಶಾದಾದ್ಯಂತ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರತಿಭಟನೆ ಹಾಗೂ ಹಿಂಸಾಚಾರ ಸಂಬಂಧ ಪೊಲೀಸರು ಈ ವರೆಗೂ 10 ಜನರನ್ನು ಬಂಧನಕ್ಕೊಳಪಡಿಸಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಭದ್ರಕ್ ಜನತೆ ಸಮಾಧಾನದಿಂದ ಇರಬೇಕೆಂದು ಮನವಿ ಮಾಡಿದ್ದಾರೆ. 
ಡಿಜಿಪಿ ಕೆ.ಬಿ.ಸಿಂಗ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರತಿಭಟನೆ ವೇಳೆ ಹಲವು ಅಂಗಡಿಗಳಲ್ಲಿ ದರೋಡೆ ಮಾಡಲಾಗಿದೆ. ದೊಡ್ಡ ಮಟ್ಟದಲ್ಲಿ ಹಿಂಸಾಚಾರಗಳಾವುದೂ ನಡೆದಿಲ್ಲ. ಸಾವು-ನೋವುಗಳು ಸಂಭವಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳು ಹಾಗೂ ವದಂತಿಗಳಿಗೆ ಜನರು ಪ್ರತಿಕ್ರಿಯೆಗಳನ್ನು ನೀಡಬಾರದು. ರಾಜ್ಯದಲ್ಲಿ ಶಾಂತಿ ಕಾಪಾಡಲು ಜನರು ಆಡಳಿತ ಮಂಡಳಿಗಳಿಗೆ ಸಹಾಯ ಮಾಡಬೇಕೆಂದು ಹೇಳಿದ್ದಾರೆ. 
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಾತನಾಡಿ, ಜನತೆ ತಾಳ್ಮೆ ಹಾಗೂ ಸಮಾಧಾನದಿಂದ ಇರಬೇಕಿದೆ. ರಾಜ್ಯದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶಾಂತಿಯವನ್ನು ಕದಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT