ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಹಾಗೂ ಪತ್ನಿ ಸಲ್ಮಾ ಅನ್ಸಾರಿ 
ದೇಶ

ತ್ರಿವಳಿ ತಲಾಖ್ ವಿವಾದ: ಮೌಲ್ವಿಗಳ ವಿರುದ್ದ ಸಲ್ಮಾ ಅನ್ಸಾರಿ ವಾಗ್ದಾಳಿ

ಕುರಾನ್ ನಲ್ಲಿ ತ್ರಿವಳಿ ತಲಾಖ್ ಎಂಬ ಯಾವುದೇ ನಿಯಮಗಳಿಲ್ಲ. ಮೌಲಾನಾಗಳು, ಮೌಲ್ವಿಗಳ ಮಾತುಗಳನ್ನು ಕೇಳುವ ಬದಲು ಮುಸ್ಲಿಂ ಮಹಿಳೆಯರು ಸ್ವತಃ ಕುರಾನ್ ನ್ನು ಓದಿ ತಿಳಿದುಕೊಳ್ಳಬೇಕೆಂದು ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಪತ್ನಿ ಸಲ್ಮಾ ಅನ್ಸಾರಿಯವರು...

ಅಲೀಗಢ: ಕುರಾನ್ ನಲ್ಲಿ ತ್ರಿವಳಿ ತಲಾಖ್ ಎಂಬ ಯಾವುದೇ ನಿಯಮಗಳಿಲ್ಲ. ಮೌಲಾನಾಗಳು, ಮೌಲ್ವಿಗಳ ಮಾತುಗಳನ್ನು ಕೇಳುವ ಬದಲು ಮುಸ್ಲಿಂ ಮಹಿಳೆಯರು ಸ್ವತಃ ಕುರಾನ್ ನ್ನು ಓದಿ ತಿಳಿದುಕೊಳ್ಳಬೇಕೆಂದು ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಪತ್ನಿ ಸಲ್ಮಾ ಅನ್ಸಾರಿಯವರು ಭಾನುವಾರ ಹೇಳಿದ್ದಾರೆ. 
ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ತ್ರಿವಳಿ ತಲಾಖ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮೌಲಾನಾಗಳು ಮೌಲ್ವಿಗಳು ಹೇಳಿದ್ದನ್ನೆಲ್ಲಾ ಕೇಳಬಾರದು. ಕುರಾತನ್ ನಲ್ಲಿ ತ್ರಿವಳಿ ತಲಾಖ್ ಎಂಬ ಯಾವುದೇ ನಿಯಮವಿಲ್ಲ. 
ರಾಷ್ಟ್ರಾದ್ಯಂತ ತ್ರಿವಳಿ ತಲಾಖ್, ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಸಂಪ್ರದಾಯದ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುತ್ತಿದ್ದು, ಮೌಲಾನಾ, ಮೌಲ್ವಿಗಳು ಹೇಳುವ ಮಾತುಗಳನ್ನು ಕೇಳುವ ಬದಲು ಎಲ್ಲಾ ಮುಸ್ಲಿಂ ಮಹಿಳೆಯರೂ ಸ್ವತಃ ಕುರಾನ್ ಓದಿ ತಿಳಿದುಕೊಳ್ಳಬೇಕು. ಆಗ ಸಮಸ್ಯೆಗೆ ಪರಿಹಾರಗಳು ಸಿಗುತ್ತದೆ. ಭಾಷಾಂತರಗೊಂಡ ಕುರಾನ್ ನ್ನು ಓದಬಾರದು. ಅರೇಬಿಕ್ ನಲ್ಲಿರುವ ಕುರಾನ್ ನ್ನು ಓದಬೇಕು. ಆಗ ಮಾತ್ರ ಕುರಾನ್ ನಲ್ಲಿ ಅಂತಹ ನಿಯಮಗಳಾವುದೂ ಇಲ್ಲ ಎಂಬುದು ಅರ್ಥವಾಗುತ್ತದೆ ಎಂದು ತಿಳಿಸಿದ್ದಾರೆ. 
ತ್ರಿವಳಿ ತಲಾಖ್ ಎಂಬುದು ವಿಚಾರವೇ ಅಲ್ಲ. ಯಾರೋ ತಲಾಖ್...ತಲಾಖ್...ತಲಾಖ್... ಎಂದು ಹೇಳಿದಾಕ್ಷಣ ವಿಚ್ಛೇದನವಾಗುವುದಿಲ್ಲ. ಕುರಾನ್ ಓದಿದ್ದರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕುರಾನ್ ನಲ್ಲಿ ಅಂತಹ ಯಾವುದೇ ನಿಯಮಗಳಿಲ್ಲ. ಕೆಲವರು ಅಂತಹ ನಿಯಮಗಳನ್ನು ಹುಟ್ಟುಹಾಕುತ್ತಿದ್ದಾರೆ. ಕುರಾನ್ ಓದದ ಮಹಿಳೆಯರು ಇಂತಹ ನಿಯಮಗಳನ್ನು ಕಣ್ಣುಮುಚ್ಚಿಕೊಂಡು ನಂಬುತ್ತಾರೆ. ಹೀಗಾಗಿ ಮಹಿಳೆಯರು ಕುರಾನ್ ಓದುವ ಧೈರ್ಯವನ್ನು ಮಾಡಬೇಕು. ನಂತರ ಅದರಲ್ಲಿರುವ ಸತ್ಯಾಸತ್ಯತೆಗಳನ್ನು ತಿಳಿದುಕೊಂಡು ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT