ಆ್ಯಪ್ ಮತ್ತು ವೆಬ್ ಸೈಟ್ ಬಿಡುಗಡೆ ಮಾಡಿದ ಅಕ್ಷಯ್ ಕುಮಾರ್ 
ದೇಶ

ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬಲ್ಲ ವೆಬ್ ಸೈಟ್ ಗೆ ನಟ ಅಕ್ಷಯ್ ಕುಮಾರ್ ಚಾಲನೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಕನಸು ನನಸಾಗಿದ್ದು, ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ "ಭಾರತ್ ಕೆ ವೀರ್" ಎಂಬ ಆ್ಯಪ್ ಮತ್ತು ವೆಬ್ ಸೈಟ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ.

ನವದೆಹಲಿ: ಭಾರತೀಯ ಸೇನೆಯ ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬಲ್ಲ ವೆಬ್ ಸೈಟ್ ರಚಿಸಬೇಕು ಎನ್ನುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಕನಸು ನನಸಾಗಿದ್ದು, ಭಾನುವಾರ ಕೇಂದ್ರ ಗೃಹ  ಸಚಿವ ರಾಜ್ ನಾಥ್ ಸಿಂಗ್ "ಭಾರತ್ ಕೆ ವೀರ್" ಎಂಬ ಆ್ಯಪ್ ಮತ್ತು ವೆಬ್ ಸೈಟ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ.

ಹುತಾತ್ಮ ಯೋಧರ ಕುಟುಂಬಗಳನ್ನು ಜನರು ನೇರವಾಗಿ ಸಂಪರ್ಕಿಸಲು ಸಾಧ್ಯವಾಗುವಂತಹ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ ಸೈಟ್‌ ಅನ್ನು ಆರಂಭಿಸುವಂತೆ ಅಕ್ಷಯ್ ಕುಮಾರ್ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಸಲಹೆ  ನೀಡಿದ್ದರು, ಅವರ ಸಲಹೆಗೆ ಕೇಂದ್ರ ಸರ್ಕಾರ ಅನುಮೋದನೆಯನ್ನೂ ನೀಡಿತ್ತು. ಬಳಿಕ ಕೇವಲ ಎರಡೂವರೆ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ವೆಬ್ ಸೈಟ್ ಅನ್ನು ನಿರ್ಮಿಸಿದ್ದು, ಇದೀಗ ಈ ವೆಬೈ ಸೈಟ್ ಕಾರ್ಯ ಕಾರ್ಯರೂಪಕ್ಕೆ  ಬಂದಿದೆ. ಹುತಾತ್ಮ ಯೋಧರ ಕುಟುಂಬಕ್ಕೆ ಧನಸಹಾಯ ಸಂಗ್ರಹಿಸಬಲ್ಲ ಮತ್ತು ಹುತಾತ್ಮ ಯೋಧರ ಕುಟುಂಬಗಳ ವಿವರಗಳನ್ನೊಳಗೊಂಡ ವೆಬ್ ಸೈಟ್ ಮತ್ತು ಮೊಬೈಲ್ ಆ್ಯಪ್ ಅನ್ನು ಭಾನುವಾರ ಕೇಂದ್ರ ಗೃಹ ಸಚಿವ ರಾಜ್  ನಾಥ್ ಸಿಂಗ್ ಹಾಗೂ ನಟ ಅಕ್ಷಯ್ ಕುಮಾರ್ ಜಂಟಿಯಾಗಿ ಬಿಡುಗಡೆ ಮಾಡಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಅಕ್ಷಯ್ ಕುಮಾರ್, ಭಯೋತ್ಪಾದನೆ ಕುರಿತ ಚಿತ್ರವನ್ನು ನೋಡುತ್ತಿದ್ದಾಗ ತಮಗೆ ಇಂತಹುದೊಂದು ಆಲೋಚನೆ ಬಂದಿತ್ತು. ಉಗ್ರರಿಗೆ ಹಣ ಕ್ರೋಢೀಕರಿಸಲು ಉಗ್ರ ಸಂಘಟನೆಗಳು  ವೆಬ್ ಸೈಟ್ ಗಳನ್ನು ಬಳಕೆ ಮಾಡುತ್ತಿರುವಾಗ ನಾವೇಕೆ ನಮ್ಮ ಯೋಧರ ಕುಟುಂಬಗಳಿಗೆ ನೆರವಾಗಬಲ್ಲ ವೆಬ್ ಸೈಟ್ ರಚಿಸಬಾರದು ಎಂದು ಕೊಂಡೆ. ಅದೇ ವಿಚಾರವನ್ನು ಕೇಂದ್ರ ಸರ್ಕಾರದೊಂದಿಗೂ ಹಂಚಿಕೊಂಡಿದ್ದೆ. ಅದಕ್ಕೆ  ಮನ್ನಣೆ ನೀಡಿದ ಸರ್ಕಾರ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ವೆಬ್ ಸೈಟ್ ಮತ್ತು ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಸರ್ಕಾರದ ಕಾಳಜಿಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದು ಅಕ್ಷಯ್ ಕುಮಾರ್ ತಿಳಿಸಿದರು.

ಹುತಾತ್ಮ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಬಯಸುವವರಿಗೆ ಈ ಅಪ್ಲಿಕೇಶನ್ ಸಹಕಾರಿಯಾಗಲಿದ್ದು, ಇದರ ಮೂಲಕ ಗರಿಷ್ಠ 15 ಲಕ್ಷ ರೂಪಾಯಿಗಳನ್ನು ಹುತಾತ್ಮರ ಕುಟುಂಬದವರ ಅಕೌಂಟ್ ನಂಬರ್‌ ಗೆ  ವರ್ಗಾಯಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!