ಸಮಾಜವಾದಿ ನಾಯಕ ಅಜಂಖಾನ್ 
ದೇಶ

ಗೋರಕ್ಷಕರ ಭೀತಿ: ದಾನವಾಗಿ ನೀಡಿದ್ದ ಹಸುವನ್ನು ಶ್ರೀಗಳಿಗೆ ಮರಳಿಸಿದ ಅಜಂಖಾನ್

ಗೋವರ್ಧನ ಮಠದ ಶಂಕರಾಚಾರ್ಯ ಪೀಠದ ಸ್ವಾಮಿ ಅಧೋಕ್ಷಜಾನಂದ ಮಹಾರಾಜ್ ಅವರು ದಾನವಾಗಿ ನೀಡಿದ್ದ ಹಸುವನ್ನು ಸಮಾಜವಾದಿ ನಾಯಕ ಅಜಂಖಾನ್ ಅವರು ಶ್ರೀಗಳಿಗೇ ವಾಪಸ್ ನೀಡಿದ್ದಾರೆ...

ರಾಮಪುರ (ಉತ್ತರಪ್ರದೇಶ): ಗೋವರ್ಧನ ಮಠದ ಶಂಕರಾಚಾರ್ಯ ಪೀಠದ ಸ್ವಾಮಿ ಅಧೋಕ್ಷಜಾನಂದ ಮಹಾರಾಜ್ ಅವರು ದಾನವಾಗಿ ನೀಡಿದ್ದ ಹಸುವನ್ನು ಸಮಾಜವಾದಿ ನಾಯಕ ಅಜಂಖಾನ್ ಅವರು ಶ್ರೀಗಳಿಗೇ ವಾಪಸ್ ನೀಡಿದ್ದಾರೆ. 
ಶ್ರೀಗಳು ನೀಡಿದ್ದ ಹಸುವನ್ನು ಮರಳಿ ಹಿಂದಕ್ಕೆ ನೀಡಿರುವ ಅಜಂಖಾನ್ ಅವರು ಶ್ರೀಗಳಿಗೆ ಪತ್ರವೊಂದನ್ನು ಬರೆದಿದ್ದು, ದೇಶದಲ್ಲಿಂದು ಮುಸ್ಲಿಮರು ಅಸುರಕ್ಷಿತ ವಾತಾವರಣದಲ್ಲಿ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ನನಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಬಸಿ ಬಳಿಯುವ ಸಲುವಾಗಿ ಗೋರಕ್ಷಕರೇ ಹಸುವನ್ನು ಹತ್ಯೆ ಮಾಡಲು ಯತ್ನಿಸಬಹುದೆಂದು ಹೇಳಿಕೊಂಡಿದ್ದಾರೆ. 
ದೇಶದಲ್ಲಿ ಮುಸ್ಲಿಮರ ವಿರುದ್ಧ ಷಡ್ಯಂತ್ರಗಳನ್ನು ರಚಿಸಲಾಗುತ್ತಿದ್ದು, ಗುಲಾಮರಿಗಿಂತಲೂ ಕೆಟ್ಟ ಪರಿಸ್ಥಿತಿಯನ್ನು ಮುಸ್ಲಿಮರು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ದ್ವಿಮುಖ ಧೋರಣೆಯನ್ನು ಅನುಸರಿಸುತ್ತಿದೆ. ವಿವಿಐಪಿಗಳು ಗೋಮಾಂಸ ತಿನ್ನಲು ಅನುಮತಿ ನೀಡಲಾಗುತ್ತಿದೆ. ಆದರೆ, ಸಾಮಾನ್ಯ ಜನತೆ ಮಾತ್ರ ಅನಗತ್ಯವಾಗಿ ಸಮಸ್ಯೆನ್ನು ಎದುರಿಸುತ್ತಿದ್ದಾರೆ. ನನ್ನ ಬಳಿ ಇದ್ದಾಗಿನಿಂದಲೂ ಹಸುವನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದೇನೆ. ಹಸುವಿನ ಭದ್ರತೆ ಹಾಗೂ ಸುರಕ್ಷತೆ ಹಿನ್ನಲೆಯಲ್ಲಿ ಹಸುವನ್ನು ಮತ್ತೆ ನಿಮಗೆ ವಾಪಸ್ ನೀಡುತ್ತಿದ್ದೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT