ಬಿಜೆಪಿ ನಾಯಕ ಆರ್.ಕೆ. ಸಿಂಗ್ 
ದೇಶ

ತ್ರಿವಳಿ ತಲಾಖ್ ಇಸ್ಲಾಂನ ಭಾಗವಲ್ಲ: ಸಲ್ಮಾ ಅನ್ಸಾರಿ ಬೆನ್ನಿಗೆ ನಿಂತ ಆರ್.ಕೆ.ಸಿಂಗ್

ತ್ರಿವಳಿ ತಲಾಖ್ ಕುರಿತಂತೆ ನಿನ್ನೆಯಷ್ಟೇ ಮೌಲ್ವಿಗಳ ವಿರುದ್ಧ ಕಿಡಿಕಾರಿದ್ದ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಪತ್ನಿ ಸಲ್ಮಾ ಅನ್ಸಾರಿಯವರ ಬೆನ್ನಿಗೆ ಬಿಜೆಪಿ ನಾಯಕ ಆರ್.ಕೆ. ಸಿಂಗ್ ಅವರು ಸೋಮವಾರ ನಿಂತಿದ್ದಾರೆ...

ನವದೆಹಲಿ: ತ್ರಿವಳಿ ತಲಾಖ್ ಕುರಿತಂತೆ ನಿನ್ನೆಯಷ್ಟೇ ಮೌಲ್ವಿಗಳ ವಿರುದ್ಧ ಕಿಡಿಕಾರಿದ್ದ  ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಪತ್ನಿ ಸಲ್ಮಾ ಅನ್ಸಾರಿಯವರ ಬೆನ್ನಿಗೆ ಬಿಜೆಪಿ ನಾಯಕ ಆರ್.ಕೆ. ಸಿಂಗ್ ಅವರು ಸೋಮವಾರ ನಿಂತಿದ್ದಾರೆ. 
ಸಲ್ಮಾ ಅನ್ಸಾರಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇಸ್ಲಾಂ ಧರ್ಮದಲ್ಲಿ ವಿಚ್ಛೇದನವೆಂಬ ಪದ್ಧತಿಯ ಭಾಗವೇ ಇಲ್ಲ. ಸಲ್ಮಾ ಅನ್ಸಾರಿಯವರ ಹೇಳಿಕೆ ಸರಿಯಾಗಿದೆ. ತ್ರಿವಳಿ ತಲಾಖ್ ಎಂಬ ಪದ್ಧತಿ ಪಾಕಿಸ್ತಾನದಲ್ಲಿಯೇ ಚಾಲ್ತಿಯಲ್ಲಿ ಇಲ್ಲ. ಇಲ್ಲಿರುವ ಕೆಲವು ಜನರು ಮಾತ್ರ ಇಂತಹ ನಿಯಮಗಳನ್ನು ಮುಸ್ಲಿಂ ಮಹಿಳೆಯರ ಮೇಲೆ ಹೇರುತ್ತಿದ್ದಾರೆ. ತ್ರಿವಳಿ ತಲಾಖ್ ಕೈಬಿಡಲು ವಿರೋಧಿಸುತ್ತಿದ್ದಾರೆಂದು ಹೇಳಿದ್ದಾರೆ. 
ತ್ರಿವಳಿ ತಲಾಖ್ ಎಂಬ ಪದ್ಧತಿಯೇ ಇಲ್ಲ ಎಂದಾದ ಮೇಲೆ ಅದಕ್ಕೆ ಬೆಂಬಲ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ. ಪ್ರತೀಯೊಂದು ಕ್ಷೇತ್ರದಲ್ಲಿ ಬದಲಾವಣೆಯೆಂಬುದು ಇದ್ದೇ ಇರುತ್ತದೆ. ಇದೂ ಕೂಡ ಅಗತ್ಯಕರವಾದ ಸುಧಾರಣೆಯಾಗಿದೆ. ತ್ರಿವಳಿ ತಲಾಖ್ ಎಂಬುದು ಧರ್ಮದ ಭಾಗವಲ್ಲ. ದೇವರೂ ಕೂಡ ಹೇಳಿಲ್ಲ. ನಿಮ್ಮ ಪತ್ನಿಯೊಂದಿಗೆ ನೀವು ಹೇಗೆ ನಡೆದುಕೊಳ್ಳುತ್ತೀರಾ ಎಂಬುದರ ಮೇಲೆ ನಿಂತಿರುತ್ತದೆ ಎಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ತ್ರಿವಳಿ ತಲಾಖ್ ವಿವಾದ ಕುರಿತಂತೆ ಹೇಳಿಕೆ ನೀಡಿದ್ದ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಪತ್ನಿ ಸಲ್ಮಾ ಅನ್ಸಾರಿಯವರು, ತ್ರಿವಳಿ ತಲಾಖ್ ಎಂಬ ನಿಯಮ ಕುರಾನ್ ನಲ್ಲಿ ಇಲ್ಲ, ಮುಸ್ಲಿಂ ಮಹಿಳೆಯರು ಮೌಲಾನಾಗಳು ಹಾಗೂ ಮೌಲ್ವಿಗಳ ಮಾತು ಕೇಳುವುದನ್ನು ನಿಲ್ಲಿಸಬೇಕು. ಮೌಲ್ವಿಗಳ ಮಾತುಗಳನ್ನು ಕೇಳುವ ಬದಲು ಮುಸ್ಲಿಂ ಮಹಿಳೆಯಲು ತಾವೇ ಸ್ವತಃ ಕುರಾನ್ ನ್ನು ಓದಿ ತಿಳಿಯಬೇಕಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT