ಸಂಗ್ರಹ ಚಿತ್ರ 
ದೇಶ

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆ ರದ್ದು

ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ರದ್ದುಗೊಳಿಸಿದೆ..

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ರದ್ದುಗೊಳಿಸಿದೆ.

ಆರ್ ಕೆ ನಗರದಲ್ಲಿನ ಮತದಾರರಿಗೆ ಮತ ಹಾಕಲು ವ್ಯಾಪಕ ಹಣ ಹಂಚಲಾಗಿದೆ ಎಂಬ ಆರೋಪದ ಮೇರೆಗೆ ಚುನಾವಣಾ ಆಯೋಗ ಈ ಕಠಿಣ ಕ್ರಮವನ್ನು ಕೈಗೊಂಡಿದೆ. ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಚುನಾವಣೆಗಾಗಿ   ಅಭ್ಯರ್ಥಿಗಳು ಮತದಾರರಿಗೆ ವ್ಯಾಪಕ ಹಣದ ಆಮಿಷ ಒಡ್ಡಿದ್ದಾರೆ. ಪ್ರತೀ ಓಟಿಗೆ ಬರೊಬ್ಬರಿ 4 ಸಾವಿರ ರುಗಳಂತೆ ಹಣ ಹಂಚಿಕೆ ಮಾಡಿದ್ದು, ಈ ರೀತಿ ಸುಮಾರು 2.24 ಲಕ್ಷ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ  ಗಂಭೀರ ಆರೋಪ ಕೇಳಿ ಬಂದಿದೆ.

ತಮಿಳುನಾಡಿನ ಮಾಜಿ ಮುಖ್ಯ​ಮಂತ್ರಿ ಜೆ. ಜಯಲಲಿತಾ ಅವರ ನಿಧನದಿಂದಾಗಿ ಚೆನ್ನೈನ ಆರ್‌.ಕೆ. ನಗರ ವಿಧಾನಸಭಾ ಕ್ಷೇತ್ರ  ತೆರ​ವಾ​ಗಿತ್ತು. ಈ ಹಿನ್ನಲೆಯಲ್ಲಿ ಇಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಹಣದ  ಹೊಳೆ ಹರಿದ ಕಾರಣ ಉಪಚುನಾವಣೆಯನ್ನೇ ಚುನಾ​ವಣಾ ಆಯೋಗ ಭಾನುವಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಪ್ರತಿ ಮತದಾರರಿಗೂ ಅಣ್ಣಾಡಿ​ಎಂಕೆಯ ಆಡಳಿತಾರೂಢ (ಶಶಿಕಲಾ) ಬಣ 4 ಸಾವಿರ ರು.  ಹಂಚಿದೆ ಎಂಬ ಮಾಹಿತಿ ಆದಾಯ ತೆರಿಗೆ ದಾಳಿ ವೇಳೆ ಖಚಿತಪಟ್ಟಿತ್ತು. ತಮಿಳುನಾಡು ಚುನಾವಣಾ ಆಧಿಕಾರಿಗಳ ಜತೆ ಹಲವು ಸುತ್ತಿನ ಸಭೆಯ ಬಳಿಕ ಆಯೋಗ ಏಪ್ರಿಲ್ 12ರಂದು ನಿಗದಿಯಾಗಿರುವ ಚುನಾ​ವಣೆಯನ್ನು  ರದ್ದುಗೊಳಿಸುವ ನಿರ್ಧಾರ ಕೈಗೊಂ​ಡಿದೆ. ಜನರು ಆಸೆ, ಆಮಿಷಗಳಿಂದ ದೂರವಾಗಿ ಪಾರದರ್ಶಕ ವಾತಾವರಣ ನಿರ್ಮಾಣವಾದ ಬಳಿಕ ಮತ್ತೊಮ್ಮೆ ಚುನಾವಣೆ ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.

ಈ ಹಿಂದೆ ಹಣ ಬಲದಿಂದ ಚುನಾವಣೆ ಎದುರಿಸಿದ ಕಾರಣಕ್ಕಾಗಿ ಅವರ್ಕುರುಚಿ ಮತ್ತು ತಂಜಾವೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಆಯೋಗ ರದ್ದುಗೊಳಿತ್ತು. ಈಗ ಮತ್ತೊಮ್ಮೆ ತಮಿಳುನಾಡಿನಲ್ಲಿ ಇದೇ ಕಾರಣಕ್ಕಾಗಿ  ಚುನಾವಣೆಯನ್ನು ಆಯೋಗ ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT