ಸಂಗ್ರಹ ಚಿತ್ರ 
ದೇಶ

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆ ರದ್ದು

ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ರದ್ದುಗೊಳಿಸಿದೆ..

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ರದ್ದುಗೊಳಿಸಿದೆ.

ಆರ್ ಕೆ ನಗರದಲ್ಲಿನ ಮತದಾರರಿಗೆ ಮತ ಹಾಕಲು ವ್ಯಾಪಕ ಹಣ ಹಂಚಲಾಗಿದೆ ಎಂಬ ಆರೋಪದ ಮೇರೆಗೆ ಚುನಾವಣಾ ಆಯೋಗ ಈ ಕಠಿಣ ಕ್ರಮವನ್ನು ಕೈಗೊಂಡಿದೆ. ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಚುನಾವಣೆಗಾಗಿ   ಅಭ್ಯರ್ಥಿಗಳು ಮತದಾರರಿಗೆ ವ್ಯಾಪಕ ಹಣದ ಆಮಿಷ ಒಡ್ಡಿದ್ದಾರೆ. ಪ್ರತೀ ಓಟಿಗೆ ಬರೊಬ್ಬರಿ 4 ಸಾವಿರ ರುಗಳಂತೆ ಹಣ ಹಂಚಿಕೆ ಮಾಡಿದ್ದು, ಈ ರೀತಿ ಸುಮಾರು 2.24 ಲಕ್ಷ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ  ಗಂಭೀರ ಆರೋಪ ಕೇಳಿ ಬಂದಿದೆ.

ತಮಿಳುನಾಡಿನ ಮಾಜಿ ಮುಖ್ಯ​ಮಂತ್ರಿ ಜೆ. ಜಯಲಲಿತಾ ಅವರ ನಿಧನದಿಂದಾಗಿ ಚೆನ್ನೈನ ಆರ್‌.ಕೆ. ನಗರ ವಿಧಾನಸಭಾ ಕ್ಷೇತ್ರ  ತೆರ​ವಾ​ಗಿತ್ತು. ಈ ಹಿನ್ನಲೆಯಲ್ಲಿ ಇಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಹಣದ  ಹೊಳೆ ಹರಿದ ಕಾರಣ ಉಪಚುನಾವಣೆಯನ್ನೇ ಚುನಾ​ವಣಾ ಆಯೋಗ ಭಾನುವಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಪ್ರತಿ ಮತದಾರರಿಗೂ ಅಣ್ಣಾಡಿ​ಎಂಕೆಯ ಆಡಳಿತಾರೂಢ (ಶಶಿಕಲಾ) ಬಣ 4 ಸಾವಿರ ರು.  ಹಂಚಿದೆ ಎಂಬ ಮಾಹಿತಿ ಆದಾಯ ತೆರಿಗೆ ದಾಳಿ ವೇಳೆ ಖಚಿತಪಟ್ಟಿತ್ತು. ತಮಿಳುನಾಡು ಚುನಾವಣಾ ಆಧಿಕಾರಿಗಳ ಜತೆ ಹಲವು ಸುತ್ತಿನ ಸಭೆಯ ಬಳಿಕ ಆಯೋಗ ಏಪ್ರಿಲ್ 12ರಂದು ನಿಗದಿಯಾಗಿರುವ ಚುನಾ​ವಣೆಯನ್ನು  ರದ್ದುಗೊಳಿಸುವ ನಿರ್ಧಾರ ಕೈಗೊಂ​ಡಿದೆ. ಜನರು ಆಸೆ, ಆಮಿಷಗಳಿಂದ ದೂರವಾಗಿ ಪಾರದರ್ಶಕ ವಾತಾವರಣ ನಿರ್ಮಾಣವಾದ ಬಳಿಕ ಮತ್ತೊಮ್ಮೆ ಚುನಾವಣೆ ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.

ಈ ಹಿಂದೆ ಹಣ ಬಲದಿಂದ ಚುನಾವಣೆ ಎದುರಿಸಿದ ಕಾರಣಕ್ಕಾಗಿ ಅವರ್ಕುರುಚಿ ಮತ್ತು ತಂಜಾವೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಆಯೋಗ ರದ್ದುಗೊಳಿತ್ತು. ಈಗ ಮತ್ತೊಮ್ಮೆ ತಮಿಳುನಾಡಿನಲ್ಲಿ ಇದೇ ಕಾರಣಕ್ಕಾಗಿ  ಚುನಾವಣೆಯನ್ನು ಆಯೋಗ ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT