ಲೋಕಸಭೆ 
ದೇಶ

ತರುಣ್ ವಿಜಯ್ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ: ಕಲಾಪಕ್ಕೆ ಅಡ್ಡಿ

ಭಾರತದಲ್ಲಿ ವರ್ಣ ಭೇದ ನೀತಿ ಇಲ್ಲ, ಕಪ್ಪುವರ್ಣೀಯರಾದ ದಕ್ಷಿಣ ಭಾರತದವರೊಂದಿಗೆ ಉತ್ತರ ಭಾರತದ ಜನತೆ ಸಹಬಾಳ್ವೆ ನಡೆಸುತ್ತಿದ್ದಾರೆ ಎಂಬ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದೆ.

ನವದೆಹಲಿ: ಭಾರತದಲ್ಲಿ ವರ್ಣ ಭೇದ ನೀತಿ ಇಲ್ಲ, ಕಪ್ಪುವರ್ಣೀಯರಾದ ದಕ್ಷಿಣ ಭಾರತದವರೊಂದಿಗೆ ಉತ್ತರ ಭಾರತದ ಜನತೆ ಸಹಬಾಳ್ವೆ ನಡೆಸುತ್ತಿದ್ದಾರೆ ಎಂಬ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದೆ. 
ಪದೇ ಪದೇ ಗದ್ದಲ ಉಂಟಾದ ಕಾರಣ ಸ್ಪೀಕರ್ ಸುಮಿತ್ರಾ ಮಹಾಜನ್ ಸದನವನ್ನು ಕೆಲಕಾಲ ಮುಂದೂಡಿದ್ದರು. ಲೋಕಸಭೆಯ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸಂಸದ, ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ  ಮಲ್ಲಿಕಾರ್ಜುನ ಖರ್ಗೆ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಲು ಅವಕಾಶ ನೀಡಬೇಕು ಎಂಬ ಮನವಿ ಮಾಡಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ತಿರಸ್ಕರಿಸಿದ ಸುಮಿತ್ರಾ ಮಹಾಜನ್ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಶೂನ್ಯ ವೇಳೆಯಲ್ಲಿಯೂ ಪ್ರಸ್ತಾಪ ಮಾಡಬಹುದು ಎಂದು ಹೇಳಿದ್ದರು. 
ಸ್ಪೀಕರ್ ಸುಮಿತ್ರಾ ಮಹಾಜನ್ ಅನುಮತಿ ನಿರಾಕರಿಸಿದ್ದರಿಂದ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಕೆಲ ಕಾಲ ಮುಂದೂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ

ಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?

Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!

SCROLL FOR NEXT