ಲೋಕಸಭೆ 
ದೇಶ

ತರುಣ್ ವಿಜಯ್ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ: ಕಲಾಪಕ್ಕೆ ಅಡ್ಡಿ

ಭಾರತದಲ್ಲಿ ವರ್ಣ ಭೇದ ನೀತಿ ಇಲ್ಲ, ಕಪ್ಪುವರ್ಣೀಯರಾದ ದಕ್ಷಿಣ ಭಾರತದವರೊಂದಿಗೆ ಉತ್ತರ ಭಾರತದ ಜನತೆ ಸಹಬಾಳ್ವೆ ನಡೆಸುತ್ತಿದ್ದಾರೆ ಎಂಬ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದೆ.

ನವದೆಹಲಿ: ಭಾರತದಲ್ಲಿ ವರ್ಣ ಭೇದ ನೀತಿ ಇಲ್ಲ, ಕಪ್ಪುವರ್ಣೀಯರಾದ ದಕ್ಷಿಣ ಭಾರತದವರೊಂದಿಗೆ ಉತ್ತರ ಭಾರತದ ಜನತೆ ಸಹಬಾಳ್ವೆ ನಡೆಸುತ್ತಿದ್ದಾರೆ ಎಂಬ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದೆ. 
ಪದೇ ಪದೇ ಗದ್ದಲ ಉಂಟಾದ ಕಾರಣ ಸ್ಪೀಕರ್ ಸುಮಿತ್ರಾ ಮಹಾಜನ್ ಸದನವನ್ನು ಕೆಲಕಾಲ ಮುಂದೂಡಿದ್ದರು. ಲೋಕಸಭೆಯ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸಂಸದ, ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ  ಮಲ್ಲಿಕಾರ್ಜುನ ಖರ್ಗೆ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಲು ಅವಕಾಶ ನೀಡಬೇಕು ಎಂಬ ಮನವಿ ಮಾಡಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ತಿರಸ್ಕರಿಸಿದ ಸುಮಿತ್ರಾ ಮಹಾಜನ್ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಶೂನ್ಯ ವೇಳೆಯಲ್ಲಿಯೂ ಪ್ರಸ್ತಾಪ ಮಾಡಬಹುದು ಎಂದು ಹೇಳಿದ್ದರು. 
ಸ್ಪೀಕರ್ ಸುಮಿತ್ರಾ ಮಹಾಜನ್ ಅನುಮತಿ ನಿರಾಕರಿಸಿದ್ದರಿಂದ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಕೆಲ ಕಾಲ ಮುಂದೂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

SCROLL FOR NEXT