ಪಶ್ಚಿಮ ಬಂಗಾಳ 
ದೇಶ

ಪಶ್ಚಿಮ ಬಂಗಾಳ: ರಾಮನವಮಿ ಆಯ್ತು ಈಗ ಹನುಮ ಜಯಂತಿ ಮೆರವಣಿಗೆಯಲ್ಲಿ ಪೊಲೀಸ್ ಲಾಠಿ ಚಾರ್ಜ್

ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ. 
ರಾಮನವಮಿ ಆಚರಣೆಯ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಇಂಥಹದ್ದೇ ಅಹಿತಕರ ಘಟನೆ ನಡೆದಿತ್ತು. ಈಗ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೇ ಹನುಮ ಜಯಂತಿ ಆಚರಣೆ ನಡೆಸಲಾಗಿದೆ ಎಂಬ ಕಾರಣಕ್ಕೆ ಬಿರ್ಭಮ್ ನಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. 
ಹನುಮ ಜಯಂತಿ ಅಂಗವಾಗಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಆದರೆ ಮೆರವಣಿಗೆ ನಡೆಸುತ್ತಿದ್ದ ಸಂಘಟನೆ ಪೂರ್ವಾನುಮತಿ ಪಡೆಯದೇ ಇರುವುದನ್ನು ನಿರಾಕರಿಸಿದೆ. " ಹನುಮ ಜಯಂತಿ ಅಂಗವಾಗಿ ಮೆರವಣಿಗೆ ನಡೆಸುವುದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವು. ಆದರೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳು ನಿರಾಕರಿಸಿದರು ಎಂದು ಪ್ರತ್ಯಾರೋಪ ಮಾಡಿದ್ದಾರೆ. 
ಕಳೆದ ವಾರ ರಾಮನವಮಿ ಆಚರಣೆಗೆ ಅಡ್ಡಿ ಉಂಟಾದಾಗ ಮಧ್ಯಪ್ರವೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಸ್ಥಳೀಯರು ರಾಮನವಮಿ ಆಚರಣೆ ಮಾಡುವುದಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT